10:04 PM Friday1 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ ಆಗಲಿದೆ ಕಣ್ಣೀರ ಕತೆ

31/07/2025, 18:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterarnataka@gmail.com

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಘಟನೆಯೊಂದು ಕೇರಳದಲ್ಲಿ ಸಿನಿಮಾ ಆಗಿ ರೂಪ ಪಡೆಯಲಿದೆ. ನಿಜ ಘಟನೆಗಳನ್ನು ಸಿನಿಮಾ ಮಾಡುವಲ್ಲಿ ಪರಿಣಿತರಾಗಿರುವ ಮಲಯಾಳಿ ಚಿತ್ರರಂಗದವರು ಕಳೆದ ವರ್ಷ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಮಾದವನ್ನು ಸಿನಿಮಾ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಬರೆಯಲಿರುವುದು ಕೇರಳದ ಶಾಸಕ ಎಕೆಎಂ ಅಶ್ರಫ್. ಕಳೆದ ವರ್ಷ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಆ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರ ಶವ ಈ ವರೆಗೆ ಸಿಕ್ಕಿಲ್ಲ. ಮೃತಪಟ್ಟವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಸಹ ಇದ್ದರು. ಆದರೆ ಅರ್ಜುನ್ ಮೃತದೇಹ ಸಿಗದೇ ಇದ್ದ ಕಾರಣ ಆತ ಬದುಕಿದ್ದಾನೆಂದು ನಂಬಲಾಗಿತ್ತು. ಕೇರಳದಲ್ಲಿ ಅರ್ಜುನ್ ಬದುಕಿ ಬರಲೆಂದು ಲಕ್ಷಾಂತರ ಮಂದಿ ಪ್ರಾರ್ಥಿಸಿದ್ದರು. ಸಾಮೂಹಿಕ ಪ್ರಾರ್ಥನೆಗಳನ್ನು ಸಹ ನಡೆಸಿದ್ದರು. ಆದರೆ ಸತತ ಕಾರ್ಯಾಚರಣೆ ಬಳಿಕವೂ ಸಹ ಅರ್ಜುನ್ ಬದುಕಲಿಲ್ಲ. ಬರೋಬ್ಬರಿ ಮೂರು ತಿಂಗಳ ಬಳಿಕ ಅರ್ಜುನ್ ಮೃತದೇಹ ಪತ್ತೆ ಆಯ್ತು. ಅರ್ಜುನ್ ಹುಡುಕಾಟದ ಕಾರ್ಯಾಚರಣೆ ವೇಲೆ ಶಾಸಕ ಅಶ್ರಫ್ ಸ್ಥಳದಲ್ಲಿಯೇ ಹಾಜರಿದ್ದರು. ಎಲ್ಲ ಕಾರ್ಯಾಚರಣೆಗಳನ್ನು ಅವರು ಹತ್ತಿರದಿಂದ ಗಮನಿಸಿದರು. ಇದೀಗ ಅಶ್ರಫ್ ಅವರು ತಮ್ಮ ಆ ಅನುಭವವನ್ನು ಆಧರಿಸಿ ಶಿರೂರು ಗುಡ್ಡ ಕುಸಿತದ ಬಗ್ಗೆ ಕತೆ ಬರೆಯಲಿದ್ದಾರೆ. ಆ ಕಥೆಯೇ ಸಿನಿಮಾ ಸಹ ಆಗಲಿದೆ. ಕೋಯಿಕೋಡಿನ ಅರ್ಜುನ್ ಶವ ಹೊರತೆಗೆಯುವ ಕಾರ್ಯಾಚರಣೆ ಬಲು ರೋಚಕವಾಗಿತ್ತು. ಆ ರೋಚಕತೆ ಮತ್ತು ಅವರ ಕುಟುಂಬದ ಭಾವುಕತೆ, ಕೇರಳದ ಜನರು ಅರ್ಜುನ್​ಗಾಗಿ ಮರುಗಿದ್ದು ಎಲ್ಲವೂ ಸಿನಿಮಾಕ್ಕೆ ವಸ್ತುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು