4:32 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ ಆಗಲಿದೆ ಕಣ್ಣೀರ ಕತೆ

31/07/2025, 18:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterarnataka@gmail.com

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಘಟನೆಯೊಂದು ಕೇರಳದಲ್ಲಿ ಸಿನಿಮಾ ಆಗಿ ರೂಪ ಪಡೆಯಲಿದೆ. ನಿಜ ಘಟನೆಗಳನ್ನು ಸಿನಿಮಾ ಮಾಡುವಲ್ಲಿ ಪರಿಣಿತರಾಗಿರುವ ಮಲಯಾಳಿ ಚಿತ್ರರಂಗದವರು ಕಳೆದ ವರ್ಷ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಮಾದವನ್ನು ಸಿನಿಮಾ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಬರೆಯಲಿರುವುದು ಕೇರಳದ ಶಾಸಕ ಎಕೆಎಂ ಅಶ್ರಫ್. ಕಳೆದ ವರ್ಷ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಆ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರ ಶವ ಈ ವರೆಗೆ ಸಿಕ್ಕಿಲ್ಲ. ಮೃತಪಟ್ಟವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಸಹ ಇದ್ದರು. ಆದರೆ ಅರ್ಜುನ್ ಮೃತದೇಹ ಸಿಗದೇ ಇದ್ದ ಕಾರಣ ಆತ ಬದುಕಿದ್ದಾನೆಂದು ನಂಬಲಾಗಿತ್ತು. ಕೇರಳದಲ್ಲಿ ಅರ್ಜುನ್ ಬದುಕಿ ಬರಲೆಂದು ಲಕ್ಷಾಂತರ ಮಂದಿ ಪ್ರಾರ್ಥಿಸಿದ್ದರು. ಸಾಮೂಹಿಕ ಪ್ರಾರ್ಥನೆಗಳನ್ನು ಸಹ ನಡೆಸಿದ್ದರು. ಆದರೆ ಸತತ ಕಾರ್ಯಾಚರಣೆ ಬಳಿಕವೂ ಸಹ ಅರ್ಜುನ್ ಬದುಕಲಿಲ್ಲ. ಬರೋಬ್ಬರಿ ಮೂರು ತಿಂಗಳ ಬಳಿಕ ಅರ್ಜುನ್ ಮೃತದೇಹ ಪತ್ತೆ ಆಯ್ತು. ಅರ್ಜುನ್ ಹುಡುಕಾಟದ ಕಾರ್ಯಾಚರಣೆ ವೇಲೆ ಶಾಸಕ ಅಶ್ರಫ್ ಸ್ಥಳದಲ್ಲಿಯೇ ಹಾಜರಿದ್ದರು. ಎಲ್ಲ ಕಾರ್ಯಾಚರಣೆಗಳನ್ನು ಅವರು ಹತ್ತಿರದಿಂದ ಗಮನಿಸಿದರು. ಇದೀಗ ಅಶ್ರಫ್ ಅವರು ತಮ್ಮ ಆ ಅನುಭವವನ್ನು ಆಧರಿಸಿ ಶಿರೂರು ಗುಡ್ಡ ಕುಸಿತದ ಬಗ್ಗೆ ಕತೆ ಬರೆಯಲಿದ್ದಾರೆ. ಆ ಕಥೆಯೇ ಸಿನಿಮಾ ಸಹ ಆಗಲಿದೆ. ಕೋಯಿಕೋಡಿನ ಅರ್ಜುನ್ ಶವ ಹೊರತೆಗೆಯುವ ಕಾರ್ಯಾಚರಣೆ ಬಲು ರೋಚಕವಾಗಿತ್ತು. ಆ ರೋಚಕತೆ ಮತ್ತು ಅವರ ಕುಟುಂಬದ ಭಾವುಕತೆ, ಕೇರಳದ ಜನರು ಅರ್ಜುನ್​ಗಾಗಿ ಮರುಗಿದ್ದು ಎಲ್ಲವೂ ಸಿನಿಮಾಕ್ಕೆ ವಸ್ತುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು