2:02 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

31/07/2025, 19:58

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಕಾರ್ಯ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಕಾಡಿನೊಳಗೆ ತಾತ್ಕಾಲಿಕ ಶೆಡ್ ನಿರ್ಮಾಣದ ಕಾರ್ಯ ಆರಂಭವಾಗಿದೆ.
ದೂರುದಾರ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಕೋರ್ಟ್ ಮುಂದೆ ಹೇಳಿರುವ ಕಾರಣ ಇದರ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ರಚಿಸಿತ್ತು. ದೂರುದಾರ ಈಗಾಗಲೇ ಗುರುತಿಸಿರುವ 13 ಸ್ಪಾಟ್ ಗಳನ್ನು ಎಸ್ಐಟಿ ತಂಡ ಮಾರ್ಕ್ ಮಾಡಿದೆ. ಇವತ್ತು ಅನುಕ್ರಮವಾಗಿ 6ನೇ ಸ್ಪಾಟ್ ನ ಉತ್ಖನನ ನಡೆದಿದೆ. 6ನೇ ಸ್ಪಾಟ್ ನಲ್ಲಿ ಶವ ಹೂತಿಟ್ಟ ಬಗ್ಗೆ
ಮಹತ್ತರವಾದ ಪುರಾವೆಗಳು ಲಭಿಸಿವೆ. ಇದೀಗ ಸಮಾಧಿಗಳ ಉತ್ಖನನ ಕಾರ್ಯ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಶೆಡನ್ನು ಕಾಡಿನೊಳಗೆ ನಿರ್ಮಿಸಲಾಗಿದೆ. ದೂರುದಾರ ಹೇಳುವ ಎಲ್ಲ ಸ್ಪಾಟ್ ಗಳಲ್ಲಿ ಅಗೆಯುವ ಅನಿವಾರ್ಯತೆ ಎಸ್ಐಟಿ ತಂಡಕ್ಕಿರುವ ಹಿನ್ನೆಲೆಯಲ್ಲಿ ಮಳೆ- ಬಿಸಿಲಿನಿಂದ ಕೊಂಚ ರಕ್ಷಣೆ ಪಡೆಯಲು ತಾತ್ಕಾಲಿಕ
ನಿರ್ಮಾಣದ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು