6:05 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

31/07/2025, 19:58

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಕಾರ್ಯ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಕಾಡಿನೊಳಗೆ ತಾತ್ಕಾಲಿಕ ಶೆಡ್ ನಿರ್ಮಾಣದ ಕಾರ್ಯ ಆರಂಭವಾಗಿದೆ.
ದೂರುದಾರ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಕೋರ್ಟ್ ಮುಂದೆ ಹೇಳಿರುವ ಕಾರಣ ಇದರ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ರಚಿಸಿತ್ತು. ದೂರುದಾರ ಈಗಾಗಲೇ ಗುರುತಿಸಿರುವ 13 ಸ್ಪಾಟ್ ಗಳನ್ನು ಎಸ್ಐಟಿ ತಂಡ ಮಾರ್ಕ್ ಮಾಡಿದೆ. ಇವತ್ತು ಅನುಕ್ರಮವಾಗಿ 6ನೇ ಸ್ಪಾಟ್ ನ ಉತ್ಖನನ ನಡೆದಿದೆ. 6ನೇ ಸ್ಪಾಟ್ ನಲ್ಲಿ ಶವ ಹೂತಿಟ್ಟ ಬಗ್ಗೆ
ಮಹತ್ತರವಾದ ಪುರಾವೆಗಳು ಲಭಿಸಿವೆ. ಇದೀಗ ಸಮಾಧಿಗಳ ಉತ್ಖನನ ಕಾರ್ಯ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಶೆಡನ್ನು ಕಾಡಿನೊಳಗೆ ನಿರ್ಮಿಸಲಾಗಿದೆ. ದೂರುದಾರ ಹೇಳುವ ಎಲ್ಲ ಸ್ಪಾಟ್ ಗಳಲ್ಲಿ ಅಗೆಯುವ ಅನಿವಾರ್ಯತೆ ಎಸ್ಐಟಿ ತಂಡಕ್ಕಿರುವ ಹಿನ್ನೆಲೆಯಲ್ಲಿ ಮಳೆ- ಬಿಸಿಲಿನಿಂದ ಕೊಂಚ ರಕ್ಷಣೆ ಪಡೆಯಲು ತಾತ್ಕಾಲಿಕ
ನಿರ್ಮಾಣದ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು