9:20 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

31/07/2025, 19:58

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಕಾರ್ಯ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಕಾಡಿನೊಳಗೆ ತಾತ್ಕಾಲಿಕ ಶೆಡ್ ನಿರ್ಮಾಣದ ಕಾರ್ಯ ಆರಂಭವಾಗಿದೆ.
ದೂರುದಾರ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಕೋರ್ಟ್ ಮುಂದೆ ಹೇಳಿರುವ ಕಾರಣ ಇದರ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ರಚಿಸಿತ್ತು. ದೂರುದಾರ ಈಗಾಗಲೇ ಗುರುತಿಸಿರುವ 13 ಸ್ಪಾಟ್ ಗಳನ್ನು ಎಸ್ಐಟಿ ತಂಡ ಮಾರ್ಕ್ ಮಾಡಿದೆ. ಇವತ್ತು ಅನುಕ್ರಮವಾಗಿ 6ನೇ ಸ್ಪಾಟ್ ನ ಉತ್ಖನನ ನಡೆದಿದೆ. 6ನೇ ಸ್ಪಾಟ್ ನಲ್ಲಿ ಶವ ಹೂತಿಟ್ಟ ಬಗ್ಗೆ
ಮಹತ್ತರವಾದ ಪುರಾವೆಗಳು ಲಭಿಸಿವೆ. ಇದೀಗ ಸಮಾಧಿಗಳ ಉತ್ಖನನ ಕಾರ್ಯ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಶೆಡನ್ನು ಕಾಡಿನೊಳಗೆ ನಿರ್ಮಿಸಲಾಗಿದೆ. ದೂರುದಾರ ಹೇಳುವ ಎಲ್ಲ ಸ್ಪಾಟ್ ಗಳಲ್ಲಿ ಅಗೆಯುವ ಅನಿವಾರ್ಯತೆ ಎಸ್ಐಟಿ ತಂಡಕ್ಕಿರುವ ಹಿನ್ನೆಲೆಯಲ್ಲಿ ಮಳೆ- ಬಿಸಿಲಿನಿಂದ ಕೊಂಚ ರಕ್ಷಣೆ ಪಡೆಯಲು ತಾತ್ಕಾಲಿಕ
ನಿರ್ಮಾಣದ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು