3:25 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಇಂದು 7ನೇ ಸ್ಪಾಟ್ ಉತ್ಖನನ; ಬಿಗಿ ಭದ್ರತೆ; ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ

01/08/2025, 11:09

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಪ್ರಕ್ರಿಯೆ ಇಂದು(ಶುಕ್ರವಾರ)4ನೇ ದಿನಕ್ಕೆ ಕಾಲಿಟ್ಟಿದ್ದು, ಮಾನವ ಮೂಳೆ ದೊರೆತ ಸ್ಪಾಟ್ ನಂಬರ್ 6ರಲ್ಲಿ ಮತ್ತಷ್ಟು ಉತ್ಖನನ ಕಾರ್ಯ ಮುಂದುವರಿಯಲಿದ್ದು, ಜತೆಗೆ 7ನೇ ಸ್ಪಾಟ್ ನ ಉತ್ಖನನ ಆರಂಭವಾಗಲಿದೆ.


ಎಸ್ಐಟಿ ತಂಡದೆದುರು ದೂರುದಾರ ಗುರುತಿಸಿದ 13 ಸ್ಪಾಟ್ ಗಳ ಪೈಕಿ ಅನುಕ್ರಮವಾಗಿ 1ರಿಂದ 5 ಸ್ಪಾಟ್ ವರೆಗೆ ಅಸ್ತಿಪಂಜರದ ಯಾವುದೇ ಕುರುಹು ಲಭ್ಯವಾಗದಿದ್ದರೂ ಸ್ಪಾಟ್ ನಂಬರ್ 6ರಲ್ಲಿ ಮಾನವ ಮೂಳೆಗಳ ಅವಶೇಷಗಳು ನಿನ್ನೆ(ಗುರುವಾರ) ದೊರಕಿತ್ತು. ಈ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಸಮಾಧಿ ಅಗೆಯುವ ಕೆಲಸವನ್ನು ಮುಂದುವರಿಸಲಾಗಿದೆ.
ಇಂದು 7ನೇ ಸ್ಪಾಟ್ ನ ಅಗೆತ ಆರಂಭಿಸಲಾಗುವುದರ ಜತೆಗೆ 8ನೇ ಸ್ಪಾಟ್ ನ ಅಗೆತಕ್ಕೆ ಸಿದ್ದತೆ ನಡೆಸಲಾಗುತ್ತಿದೆ.
6ನೇ ಸ್ಪಾಟ್ ನಲ್ಲಿ ನಿನ್ನೆ ಒಟ್ಟು 12 ಮಾನವ ಮೂಳೆ ಸಿಕ್ಕಿದ್ದು, ಸದ್ಯ ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಆರನೇ ಪಾಯಿಂಟ್‌ನಲ್ಲಿ ಎಸ್ಐಟಿ ತಂಡ ಕಾನೂನು ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಮುಂದುವರಿಸುತ್ತಿದ್ದಾರೆ. ಎಸ್ಐಟಿ ಅಧಿಕಾರಿಗಳು ಯಾವುದೇ ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ ಭದ್ರತೆ ಕೈಗೊಂಡಿದ್ದಾರೆ.
ಸಮಾಧಿಯೊಳಗೆ ನೀರು ತುಂಬುವ ಸಾಧ್ಯತೆ ಇರುವ ಕಾರಣದಿಂದ ಸಾಕ್ಷ್ಯಗಳು ಹಾನಿಯಾಗುವ ಆತಂಕ ಇದೆ. ಈ ಹಿನ್ನೆಲೆಯಲ್ಲಿ, ಸಮಾಧಿಯ ಮೇಲ್ಭಾಗ ಹಾಗೂ ನಾಲ್ಕು ದಿಕ್ಕುಗಳಲ್ಲಿ ಶೀಟ್‌ಗಳನ್ನು ಅಳವಡಿಸಿ ಪ್ರಾಥಮಿಕ ಸಂರಕ್ಷಣಾ ಕ್ರಮ ಕೈಗೊಳ್ಳಲಾಗಿದೆ. ಸ್ಥಳದಲ್ಲಿರುವ ಗುಂಡಿಯ ಸುತ್ತಲೂ ನಾಲ್ಕು ತಡೆಗೋಡೆಗಳಂತೆ ಶೀಟ್ ಹಾಕಿ ಸುರಕ್ಷತೆ ಒದಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು