1:11 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಜನಸಾಮಾನ್ಯರಿಗೆ ತೊಂದರೆ..! ಆಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

01/08/2025, 12:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ತಾಲೂಕು ಕಚೇರಿಗೆ ಬರುವ ಜನಸಾಮಾನ್ಯರಿಗೆ ಮತ್ತು ವಾಹನಗಳಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ಸಾರ್ವಜನಿಕರು ದೂರಿದ್ದಾರೆ.

ತಾಲೂಕು ಕಚೇರಿಗೆ ನಿತ್ಯ ತಮ್ಮ ದೈನಂದಿನ ಕೆಲಸಗಳಿಗಾಗಿ ಬಂದಿರುವ ಜನಸಾಮಾನ್ಯರಿಗೆ ಓಡಾಡಲು ಕೂಡ ತೊಂದರೆಯಾಗುವ ರೀತಿಯಲ್ಲಿ ಕೆಲವು ಜನರು ವಾಹನ ತಂದು ಪಾರ್ಕಿಂಗ್‌ನಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಾರೆ. ತಾಲೂಕು ಕಚೇರಿ ಆವರಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಇತ್ತ ಶಿವಮೊಗ್ಗ, ಉಡುಪಿ, ಮಂಗಳೂರಿಗೆ ಬಸ್ ಹತ್ತಿ ಹೊಗುತ್ತಿರುವ ದೂರು ಕೇಳಿ ಬಂದಿದೆ. ಪಟ್ಟಣದ ರಸ್ತೆ ಅಕ್ಕ ಪಕ್ಕ ವಾಹನಗಳನ್ನು ಪಾರ್ಕಿಂಗ್ ಮಾಡಿದಂತೆ ತಾಲೂಕು ಕಚೇರಿ ಆವರಣದಲ್ಲಿ ಪಾರ್ಕಿಂಗ್ ಮಾಡಿ ಬೇರೆ ಕಡೆ ಹೋಗುತ್ತಾರೆ. ಇದರಿಂದ ತಾಲೂಕು ಕಚೇರಿಗೆ ಬರುವ ಇತರೆ ವಾಹನಗಳಿಗೆ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ ಎಂಬ ಮಾತು ಕೂಡ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಈ ರೀತಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಆಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ತಾಲೂಕು ಆಡಳಿತ ಗಮನ ಹರಿಸಿ ಓರ್ವ ಸೆಕ್ಯೂರಿಟಿ ಗಾರ್ಡ್ ನೇಮಿಸುವಂತೆ ತಾಲೂಕ ಕಚೇರಿ ಬಂದು ತಮ್ಮ ಕಚೇರಿಯ ಕೆಲಸ ಮುಗಿಸಿ ತಮ್ಮ ವಾಹನವನ್ನು ತೆಗೆಯಲಾಗದೆ ಗಂಟೆಗಟ್ಟಲೆ ಕಾದು ಕಾದು ನೊಂದ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು