2:53 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಜನಸಾಮಾನ್ಯರಿಗೆ ತೊಂದರೆ..! ಆಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

01/08/2025, 12:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ತಾಲೂಕು ಕಚೇರಿಗೆ ಬರುವ ಜನಸಾಮಾನ್ಯರಿಗೆ ಮತ್ತು ವಾಹನಗಳಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ಸಾರ್ವಜನಿಕರು ದೂರಿದ್ದಾರೆ.

ತಾಲೂಕು ಕಚೇರಿಗೆ ನಿತ್ಯ ತಮ್ಮ ದೈನಂದಿನ ಕೆಲಸಗಳಿಗಾಗಿ ಬಂದಿರುವ ಜನಸಾಮಾನ್ಯರಿಗೆ ಓಡಾಡಲು ಕೂಡ ತೊಂದರೆಯಾಗುವ ರೀತಿಯಲ್ಲಿ ಕೆಲವು ಜನರು ವಾಹನ ತಂದು ಪಾರ್ಕಿಂಗ್‌ನಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಾರೆ. ತಾಲೂಕು ಕಚೇರಿ ಆವರಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಇತ್ತ ಶಿವಮೊಗ್ಗ, ಉಡುಪಿ, ಮಂಗಳೂರಿಗೆ ಬಸ್ ಹತ್ತಿ ಹೊಗುತ್ತಿರುವ ದೂರು ಕೇಳಿ ಬಂದಿದೆ. ಪಟ್ಟಣದ ರಸ್ತೆ ಅಕ್ಕ ಪಕ್ಕ ವಾಹನಗಳನ್ನು ಪಾರ್ಕಿಂಗ್ ಮಾಡಿದಂತೆ ತಾಲೂಕು ಕಚೇರಿ ಆವರಣದಲ್ಲಿ ಪಾರ್ಕಿಂಗ್ ಮಾಡಿ ಬೇರೆ ಕಡೆ ಹೋಗುತ್ತಾರೆ. ಇದರಿಂದ ತಾಲೂಕು ಕಚೇರಿಗೆ ಬರುವ ಇತರೆ ವಾಹನಗಳಿಗೆ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ ಎಂಬ ಮಾತು ಕೂಡ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಈ ರೀತಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಆಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ತಾಲೂಕು ಆಡಳಿತ ಗಮನ ಹರಿಸಿ ಓರ್ವ ಸೆಕ್ಯೂರಿಟಿ ಗಾರ್ಡ್ ನೇಮಿಸುವಂತೆ ತಾಲೂಕ ಕಚೇರಿ ಬಂದು ತಮ್ಮ ಕಚೇರಿಯ ಕೆಲಸ ಮುಗಿಸಿ ತಮ್ಮ ವಾಹನವನ್ನು ತೆಗೆಯಲಾಗದೆ ಗಂಟೆಗಟ್ಟಲೆ ಕಾದು ಕಾದು ನೊಂದ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು