12:18 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್ ತೀರ್ಪು; ಕಣ್ಣೀರಿಟ್ಟ ಮಾಜಿ ಸಂಸದ

01/08/2025, 17:39

ಬೆಂಗಳೂರು(reporterkarnataka.com): ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ.
ಪ್ರಜ್ವಲ್ ರೇವಣ್ಣ ತನ್ನ ಕೆ.ಆರ್.ನಗರದ ಮನೆಯಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ದೂರು ನೀಡಲಾಗಿತ್ತು.
ನ್ಯಾ. ಗಜಾನನ ಭಟ್‌ ಭಟ್‌ ಅವರಿದ್ದ ಪೀಠ ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್‌ ರೇವಣ್ಣ ಕೂಡ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್‌ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್‌ ರೇವಣ್ಣ ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು