3:49 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ: ಬಿಜೆಪಿ ಸಂಸದ, ಶಾಸಕರ ನಿಯೋಗ ಮುಖ್ಯಮಂತ್ರಿ ಭೇಟಿ; ಮಧ್ಯ ಪ್ರವೇಶಕ್ಕೆ ಆಗ್ರಹ

01/08/2025, 18:53

ಬೆಂಗಳೂರು(repoeterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.
ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು ನಮ್ಮ ಜಿಲ್ಲೆಯ ಆರ್ಥಿಕತೆಗೂ ಹೊಡೆತ ನೀಡಿದ್ದು, ಸಾವಿರಾರು ಕಾರ್ಮಿಕರ ಬದುಕು ದುಸ್ತರಗೊಂಡಿದೆ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವಂತೆ ನಮ್ಮೆಲ್ಲರ ಆಗ್ರಹವಾಗಿದೆ.

ಇದೇ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ರವರನ್ನು ಸಹ ಭೇಟಿ ಮಾಡಿ ಜಿಲ್ಲೆಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಸೇರಿದಂತೆ ಶಾಸಕರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಸಂತ ಜೆ.ಪೂಜಾರಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು