1:03 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

02/08/2025, 21:38

ಚಿಕ್ಕಮಗಳೂರು(reporterkarnataka.com): ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ಕಾಫಿನಾಡ ಕಳಸದಲ್ಲೂ ಮಾಹಿತಿ ಕಲೆ ಹಾಕಿದ್ದಾರೆ.
ಕಳಸ ತಾಲೂಕಿನ ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಎನ್.ಐ.ಎ. ಅಧಿಕಾರಿಗಳು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿತರ ಮನೆಗೂ ಭೇಟಿ ನೀಡಿದ್ದಾರೆ. ಮರ್ಡರ್ ಪ್ರಕರಣ ಸಂಬಂಧ ಕಳಸ ಸಮೀಪದ ಹೋಂ ಸ್ಟೇ ಒಂದರಲ್ಲಿ ಆರೋಪಿತರೆಲ್ಲರೂ ವಾಸ್ತವ್ಯದ ಅನುಮಾನದ ಹಿನ್ನೆಲೆ ಅಧಿಕಾರಿಗಳು ಭೇಟಿ, ಕೆಲವೊಂದು ಮಾಹಿತಿ ಕಲೆ ಹಾಕಿದ್ದಾರೆ. ಕೊಲೆ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದ ಎಂಟು ಆರೋಪಿಗಳ ಪೈಕಿ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆ ಕಳಸ ಪಟ್ಟಣದವರಾಗಿದ್ದರು. ಕಳಸ ಪಟ್ಟಣದ ರಂಜಿತ್ ಹಾಗೂ ಕೋಟೆಹೊಳೆಯ ನಾಗರಾಜ್ ಎಂಬ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಇಬ್ಬರು ಯುವಕರು ಕಳಸ ಪಟ್ಟಣದಲ್ಲಿ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದರು. ಕುಡಿತದ ಚಟಕ್ಕೆ ಒಳಗಾಗಿದ್ದ ಈ ಇಬ್ಬರು ನಿತ್ಯ ಕುಡಿಯುತ್ತಿದ್ದರು. ಸುಹಾಸ್ ಶೆಟ್ಟಿ ಕೊಲೆಗೂ ಒಂದು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟು ಮಂಗಳೂರು ಸೇರಿಕೊಂಡಿದ್ದರು ಎನ್ನಲಾಗಿತ್ತು.‌ ಕಾಫಿನಾಡ ಈ ಇಬ್ಬರು ಯುವಕರು ಕೊಲೆ ಪ್ರಕರಣದ ಎ2 ಆರೋಪಿಯಾಗಿದ್ದ ನಿಯಾಜ್ ಸ್ನೇಹಿತರಾಗಿದ್ದರು ಎನ್ನಲಾಗಿತ್ತು. ನಿಯಾಜ್ ನ ಸಂಬಂಧಿಕರು ಕಳಸದಲ್ಲಿರುವುದರಿಂದ ಆಗಾಗ ನಿಯಾಜ್ ಕಳಸಕ್ಕೆ ಬರ್ತಿದ್ದ. ಹಾಗಾಗಿ, ಕಳೆದ ಮೂರು ವರ್ಷಗಳಿಂದ ನಿಯಾಜ್, ರಂಜಿತ್ ಹಾಗೂ ನಾಗರಾಜ್ ಸ್ನೇಹಿತರಾಗಿದ್ದರು ಎಂದು ಹೇಳಲಾಗಿತ್ತು. ಅಲ್ಲದೇ ಇವರೆಲ್ಲರೂ ಸೇರಿಕೊಂಡು ಕೊಲೆಗೂ ಮುನ್ನ ತಿಂಗಳ ಹಿಂದೆ ಕಳಸ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡಿದ್ದರಂತೆ. ಈ ಪಾರ್ಟಿ ಮುಗಿಸಿ ರಂಜಿತ್ ಹಾಗೂ ನಾಗರಾಜ್ ಕಳಸದಿಂದ ಮಂಗಳೂರಿಗೆ ಹೋಗಿದ್ದರು ಎಂದು ಹೇಳಲಾಗಿತ್ತು. ಇದೀಗ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಎನ್.ಐ.ಎ. ಅಧಿಕಾರಿಗಳ ಕಳಸಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು