1:46 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ: ಶಾಸಕ ವೇದವ್ಯಾಸ ಕಾಮತ್ ಸಾರಥ್ಯ

03/08/2025, 10:59

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ.
ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು