3:21 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

Mangaluru | ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ ಆಟಿಡೊಂಜಿ ದಿನ: 47 ಬಗೆಯ ಖಾದ್ಯ

03/08/2025, 12:09

ಮಂಗಳೂರು(reporterkarnataka.com): ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಟಿಡೊಂಜಿ ದಿನ ಜರುಗಿತು.


ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ, ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ಎಂ.ಬಿ. ಅವರು ದೀಪ ಬೆಳಗಿಸಿ, ತೆಂಗಿನ ಸಿರಿ ಅರಳಿಸಿ, ಉದ್ಘಾಟಿಸಿದರು,
ಮಕ್ಕಳು ತಮ್ಮ ಹೆತ್ತವರ ಸಹಕಾರದೊಂದಿಗೆ ತಯಾರಿಸಿದ 47 ಖಾದ್ಯಗಳನ್ನು ವೇದಿಕೆಯಲ್ಲಿ ಜೋಡಿಸಿ ಇಟ್ಟು, ಖಾದ್ಯಗಳ ಮಹತ್ವ, ತಯಾರಿಸಲು ಬೇಕಾದ ಸಾಮಾಗ್ರಿಗಳ ಮಾಹಿತಿ ಮಕ್ಕಳಿಗೆ ನೀಡಲಾಯಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ನಯನಾ ಕುಮಾರಿ ಕೆ. ಅವರು ವಹಿಸಿದ್ದರು. ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಝಾಕ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಅಬೂಬಕ್ಕರ್, ಪ್ರಾ ಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಸುಜಾತಾ ಅವರು ಉಪಸ್ಥಿತರಿದ್ದರು,
ಶಾಲಾ ಮಕ್ಕಳು ಪ್ರಾರ್ಥನೆಗೈದರು, ಶಾಲಾ ವಿಜ್ಞಾನ ಶಿಕ್ಷಕಿ ವಿನಿತಾ ಮೇಡಂ ಅವರು ಆಷಾಢ ತಿಂಗಳಲ್ಲಿ ನಮ್ಮ ಹಿರಿಯರು ಪಟ್ಟ ಕಷ್ಟ, ರೋಗ ರುಜಿನ ದೂರ ಗೊಳಿಸುವ ಆಟಿ ಕಳೆಂಜನ ಬಗ್ಗೆ, ಆಷಾಢ ಅಮಾವಾಸ್ಯೆಯ ದಿನ ಕುಡಿಯುವ ಹಾಳೆಮರದ ತೊಗಟೆಯಿಂದ ತಯಾರಿಸುವ ಕಷಾಯದ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಶಿಕ್ಷಕಿ ಸೀಮಾ ಮರಿಯಾ ಡಿಸೋಜ ಅವರು ಸ್ವಾಗತಿಸಿದರು, ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಅವರು ಧನ್ಯವಾದವಿತ್ತರು, ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಜೋಗಿ ಕಾರ್ಯಕ್ರಮ ನಿರೂಪಿಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು