4:05 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Mangaluru | ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ ಆಟಿಡೊಂಜಿ ದಿನ: 47 ಬಗೆಯ ಖಾದ್ಯ

03/08/2025, 12:09

ಮಂಗಳೂರು(reporterkarnataka.com): ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಟಿಡೊಂಜಿ ದಿನ ಜರುಗಿತು.


ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ, ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ಎಂ.ಬಿ. ಅವರು ದೀಪ ಬೆಳಗಿಸಿ, ತೆಂಗಿನ ಸಿರಿ ಅರಳಿಸಿ, ಉದ್ಘಾಟಿಸಿದರು,
ಮಕ್ಕಳು ತಮ್ಮ ಹೆತ್ತವರ ಸಹಕಾರದೊಂದಿಗೆ ತಯಾರಿಸಿದ 47 ಖಾದ್ಯಗಳನ್ನು ವೇದಿಕೆಯಲ್ಲಿ ಜೋಡಿಸಿ ಇಟ್ಟು, ಖಾದ್ಯಗಳ ಮಹತ್ವ, ತಯಾರಿಸಲು ಬೇಕಾದ ಸಾಮಾಗ್ರಿಗಳ ಮಾಹಿತಿ ಮಕ್ಕಳಿಗೆ ನೀಡಲಾಯಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ನಯನಾ ಕುಮಾರಿ ಕೆ. ಅವರು ವಹಿಸಿದ್ದರು. ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಝಾಕ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಅಬೂಬಕ್ಕರ್, ಪ್ರಾ ಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಸುಜಾತಾ ಅವರು ಉಪಸ್ಥಿತರಿದ್ದರು,
ಶಾಲಾ ಮಕ್ಕಳು ಪ್ರಾರ್ಥನೆಗೈದರು, ಶಾಲಾ ವಿಜ್ಞಾನ ಶಿಕ್ಷಕಿ ವಿನಿತಾ ಮೇಡಂ ಅವರು ಆಷಾಢ ತಿಂಗಳಲ್ಲಿ ನಮ್ಮ ಹಿರಿಯರು ಪಟ್ಟ ಕಷ್ಟ, ರೋಗ ರುಜಿನ ದೂರ ಗೊಳಿಸುವ ಆಟಿ ಕಳೆಂಜನ ಬಗ್ಗೆ, ಆಷಾಢ ಅಮಾವಾಸ್ಯೆಯ ದಿನ ಕುಡಿಯುವ ಹಾಳೆಮರದ ತೊಗಟೆಯಿಂದ ತಯಾರಿಸುವ ಕಷಾಯದ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಶಿಕ್ಷಕಿ ಸೀಮಾ ಮರಿಯಾ ಡಿಸೋಜ ಅವರು ಸ್ವಾಗತಿಸಿದರು, ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಅವರು ಧನ್ಯವಾದವಿತ್ತರು, ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಜೋಗಿ ಕಾರ್ಯಕ್ರಮ ನಿರೂಪಿಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು