1:09 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

Chikkamagaluru | ಜನಾಕ್ರೋಶಕ್ಕೆ ಬೆದರಿದ ಸರಕಾರ: ನಾಲ್ಕೇ ದಿನಗಳಲ್ಲಿ ಕಾಡಾನೆ ಸೆರೆಗೆ ಮತ್ತೆ ಕಾರ್ಯಾಚರಣೆ

04/08/2025, 12:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿಗರ ಆಕ್ರೋಶಕ್ಕೆ ಮತ್ತೊಮ್ಮೆ ಬೆದರಿದ ಸರ್ಕಾರ ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ.


ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದಿತ್ತು. ಮಲೆನಾಡಿಗರ ತಾಳ್ಮೆಯ ಕಟ್ಟೆ ಒಡೆದಿತ್ತು. ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಂಗಮೇಶ್ವರಪೇಟೆ ಅರಣ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಾರಿಗೂ ಕೂಡ ಮುತ್ತಿಗೆ ಹಾಕಿದ್ದರು. ಗಂಟೆಗಟ್ಟಲೇ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಜನರ ಆಕ್ರೋಶಕ್ಕೆ ಬೆದರಿದ ಸರ್ಕಾರ ಪ್ರತಿಭಟನೆ ನಡೆಯುತ್ತಿರುವಾಗಲೇ ಸ್ಥಳಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ 4 ಕುಮ್ಕಿ ಆನೆಗಳನ್ನ ಕರೆಸಿ 2 ಆನೆ ಸೆರೆ ಹಿಡಿಯುತ್ತೇವೆ ಎಂದಿದ್ರು. ಆದರೆ, ಕುಮ್ಕಿ ಆನೆಗಳು ಒಂದು ಪುಂಡಾನೆಯನ್ನ ಸೆರೆ ಹಿಡಿಯುತ್ತಿದ್ದಂತೆ ಕುಮ್ಕಿ ಆನೆಗಳು ಲಾರಿ ಹತ್ತಿದ್ವು. ಜನ ಹೇಳಿದ್ದು ಮೂರು ಆನೆ. ಸರ್ಕಾರದ ಹೇಳಿದ್ದು ಎರಡು ಆನೆ. ಆದರೆ, ಒಂದು ಆನೆ ಸೆರೆ ಹಿಡಿದು ಕುಮ್ಕಿ ಆನೆಗಳು ವಾಪಸ್ ಹೋಗಿದ್ದಕ್ಕೆ ಜನ ಮತ್ತೊಮ್ಮೆ ಹೋರಾಟದ ಬಗ್ಗೆ ಚಿಂತಿಸ ತೊಡಗಿದ್ದರು. ಇದರ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾಡಾನೆ ಸೆರೆಗೆ ಮತ್ತೆ ಅನುಮತಿ ನೀಡಿರೋದ್ರಿಂದ ಬಿಡಾರಕ್ಕೆ ವಾಪಸ್ ಹೋಗಿದ್ದ ಕುಮ್ಕಿ ಆನೆಗಳು ಮತ್ತೆ ವಾಪಸ್ ಬಂದಿವೆ. ಇಂದಿನಿಂದ ಮೂವರನ್ನ ಎನ್.ಆರ್.ಪುರದ ಮುತ್ತಿನಕೊಪ್ಪ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ, ಒಮ್ಮೆ ಕುಮ್ಕಿ ಆನೆಗಳನ್ನ ತಂದು-ತಗೆದುಕೊಂಡು ಹೋಗಲು ಲಕ್ಷಾಂತರ ಖರ್ಚು ಬರುತ್ತೆ. ಅಧಿಕಾರಿಗಳು-ಸರ್ಕಾರ 3-4 ದಿನಕ್ಕೆ ಆನೆಗಳನ್ನ ಸಾಗಾಟ ಮಾಡ್ತಿರೋದು ಸರ್ಕಾರದ ಬೊಕ್ಕಸಕ್ಕೆ ನಷ್ಟವಲ್ಲವೇ ಎಂದು ಜನ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು