1:29 PM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ…

ಇತ್ತೀಚಿನ ಸುದ್ದಿ

Chikkamagaluru | ಜನಾಕ್ರೋಶಕ್ಕೆ ಬೆದರಿದ ಸರಕಾರ: ನಾಲ್ಕೇ ದಿನಗಳಲ್ಲಿ ಕಾಡಾನೆ ಸೆರೆಗೆ ಮತ್ತೆ ಕಾರ್ಯಾಚರಣೆ

04/08/2025, 12:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿಗರ ಆಕ್ರೋಶಕ್ಕೆ ಮತ್ತೊಮ್ಮೆ ಬೆದರಿದ ಸರ್ಕಾರ ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ.


ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದಿತ್ತು. ಮಲೆನಾಡಿಗರ ತಾಳ್ಮೆಯ ಕಟ್ಟೆ ಒಡೆದಿತ್ತು. ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಂಗಮೇಶ್ವರಪೇಟೆ ಅರಣ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಾರಿಗೂ ಕೂಡ ಮುತ್ತಿಗೆ ಹಾಕಿದ್ದರು. ಗಂಟೆಗಟ್ಟಲೇ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಜನರ ಆಕ್ರೋಶಕ್ಕೆ ಬೆದರಿದ ಸರ್ಕಾರ ಪ್ರತಿಭಟನೆ ನಡೆಯುತ್ತಿರುವಾಗಲೇ ಸ್ಥಳಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ 4 ಕುಮ್ಕಿ ಆನೆಗಳನ್ನ ಕರೆಸಿ 2 ಆನೆ ಸೆರೆ ಹಿಡಿಯುತ್ತೇವೆ ಎಂದಿದ್ರು. ಆದರೆ, ಕುಮ್ಕಿ ಆನೆಗಳು ಒಂದು ಪುಂಡಾನೆಯನ್ನ ಸೆರೆ ಹಿಡಿಯುತ್ತಿದ್ದಂತೆ ಕುಮ್ಕಿ ಆನೆಗಳು ಲಾರಿ ಹತ್ತಿದ್ವು. ಜನ ಹೇಳಿದ್ದು ಮೂರು ಆನೆ. ಸರ್ಕಾರದ ಹೇಳಿದ್ದು ಎರಡು ಆನೆ. ಆದರೆ, ಒಂದು ಆನೆ ಸೆರೆ ಹಿಡಿದು ಕುಮ್ಕಿ ಆನೆಗಳು ವಾಪಸ್ ಹೋಗಿದ್ದಕ್ಕೆ ಜನ ಮತ್ತೊಮ್ಮೆ ಹೋರಾಟದ ಬಗ್ಗೆ ಚಿಂತಿಸ ತೊಡಗಿದ್ದರು. ಇದರ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾಡಾನೆ ಸೆರೆಗೆ ಮತ್ತೆ ಅನುಮತಿ ನೀಡಿರೋದ್ರಿಂದ ಬಿಡಾರಕ್ಕೆ ವಾಪಸ್ ಹೋಗಿದ್ದ ಕುಮ್ಕಿ ಆನೆಗಳು ಮತ್ತೆ ವಾಪಸ್ ಬಂದಿವೆ. ಇಂದಿನಿಂದ ಮೂವರನ್ನ ಎನ್.ಆರ್.ಪುರದ ಮುತ್ತಿನಕೊಪ್ಪ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ, ಒಮ್ಮೆ ಕುಮ್ಕಿ ಆನೆಗಳನ್ನ ತಂದು-ತಗೆದುಕೊಂಡು ಹೋಗಲು ಲಕ್ಷಾಂತರ ಖರ್ಚು ಬರುತ್ತೆ. ಅಧಿಕಾರಿಗಳು-ಸರ್ಕಾರ 3-4 ದಿನಕ್ಕೆ ಆನೆಗಳನ್ನ ಸಾಗಾಟ ಮಾಡ್ತಿರೋದು ಸರ್ಕಾರದ ಬೊಕ್ಕಸಕ್ಕೆ ನಷ್ಟವಲ್ಲವೇ ಎಂದು ಜನ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು