7:45 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆ: ಕಕ್ಕಡ ಪದ್’ನೆಟ್ಟ್ ಪ್ರಯುಕ್ತ ಪಂಜಿನ ಮೆರವಣಿಗೆ

04/08/2025, 14:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಹಿತರಕ್ಷಣಾ ಬಳಗ, ಕ್’ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ವತಿಯಿಂದ ಭಾನುವಾರ 14ನೇ ವರ್ಷದ ಕಕ್ಕಡ ಪದ್ ‘ನೆಟ್ಟ್ ಹಬ್ಬ ಆಚರಣೆ ಮತ್ತು ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಪಂಜಿನ ಮೆರವಣಿಗೆ ಆಕರ್ಷಕವಾಗಿ ನಡೆಯಿತು.
ಪೊನ್ನಂಪೇಟೆ ಕೊಡವ ಸಮಾಜದಿಂದ ಪಂಜು ಹಿಡಿದು ಸಾಂಪ್ರದಾಯಿಕ ಉಡುಗೆ ತೊಡಗೆಗಳನ್ನು ಧರಿಸಿ ವಾಲಗದೊಂದಿಗೆ ಹೊರಟ ಕೊಡವರು ಬಸವೇಶ್ವರ ದೇವಾಲಯ ಸತ್ತು ಹಾಕಿ ನಂತರ ಕೊಡವ ಸಮಾಜದಲ್ಲಿ ಸಮಾಗಮಗೊಂಡರು.
ಕೊಡವ ಸಮಾಜದಲ್ಲಿ ದಿನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಟೆಲಿಫಿಲ್ಮ್ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ದಿನದ ಅಂಗವಾಗಿ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮ ಚಿರಿಯಪಂಡ ಎಂ. ರಾಜನಂಜಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಕೊಡವ ಎಜುಕೇಶನ್ ಸೊಸೈಟಿ (ಸಿಐಟಿ) ಅಧ್ಯಕ್ಷರಾದ ಡಾ. ಮುಕ್ಕಾಟಿರ ಸಿ. ಕಾರ್ಯಪ್ಪ, ಮತ್ತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಹಾಗೂ ಕೊಡವ ಜಾನಪದ ತಜ್ಞ ಕಾಳಿಮಾಡ ಎಂ. ಮೋಟಯ್ಯ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಪ್ರಗತಿಪರ ಕಾಫಿ ಬೆಳೆಗಾರ ಕಳ್ಳಿಚಂಡ ಚಂಗಪ್ಪ, 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಂಬಂಡ ಆಶ್ರಯಿ ಅಕ್ಕಮ್ಮ, ದ್ವಿತೀಯ ಪಿ ಯು ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಟ್ರಂಗಡ ಪನ್ಯ ಪೊನ್ನಮ್ಮ ಅವರನ್ನು ಸನ್ಮಾನಿಸಿದರು.
ನಂತರ ಸಾಮೂಹಿಕವಾಗಿ ಸಾಂಪ್ರದಾಯಿಕ ಕಕ್ಕಡ ಖಾದ್ಯ ತಿನಿಸು ಹಾಗೂ ವಿಶೇಷ ಉಟೋಪಚಾರ ಅಚ್ಚುಕಟ್ಟಾಗಿ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಸಂಖ್ಯಾ ಕೊಡವರು ಒಟ್ಟಾಗಿ ಸೇರಿ ಕಕ್ಕಡ 18 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು