7:24 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರಿಲ್ಯಾಕ್ಸ್​ ಮೂಡ್​​ನಲ್ಲಿ ದಸರಾ ಗಜಪಡೆ: ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಆಗಸ್ಟ್ 9ಕ್ಕೆ ಮೈಸೂರು ಅರಮನೆ ಎಂಟ್ರಿ

05/08/2025, 20:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಸೋಮವಾರ ಸಂಜೆ ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿವೆ.
*ರಿಲ್ಯಾಕ್ಸ್​ ಮೂಡ್​​ನಲ್ಲಿ ಗಜಪಡೆ:* ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆ ಸದ್ಯ ರಿಲ್ಯಾಕ್ಸ್ ಮೂಡ್​ನಲ್ಲಿದ್ದು, ದಸರಾ ಆನೆಗಳನ್ನು ನೋಡಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಇನ್ನು ಆಗಸ್ಟ್​ 10ರ ಸಂಜೆ ಗಜಪಡೆ ಅರಮನೆ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಮಾಹಿತಿ ನೀಡಿದ್ದಾರೆ.
*ಮೊದಲ ಬಾರಿಗೆ ಸಂಜೆ ವೇಳೆ ಗಜಪಡೆಗೆ ಅರಮನೆಗೆ ಸ್ವಾಗತ:* ಸೋಮವಾರ ನಾಗರಹೊಳೆ ಸಮೀಪದ ವೀರನಹೊಸಹಳ್ಳಿಯಿಂದ ಗಜಯಪಣದ ಮೂಲಕ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೂದಲ ತಂಡ ಮೈಸೂರಿಗೆ ಆಗಮಿಸಿದ್ದು, ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ತಂಗಿವೆ. ಈ ಆನೆಗಳಿಗೆ ದಸರಾದಲ್ಲಿ ಭಾಗವಹಿಸಿರುವ ಅನುಭವ ಇರುವ ಕಾರಣ ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿವೆ.
ಮೊದಲ ಬಾರಿಗೆ ಸಂಜೆ ವೇಳೆ ಅರಮನೆಗೆ ಸ್ವಾಗತ: ಆಗಸ್ಟ್​ 10ರಂದು ಸಂಜೆ 6:40 ರಿಂದ 7:20ರ ಶುಭ ಮಕರ ಗೋಧೋಳಿ ಲಗ್ನದಲ್ಲಿ ಜಯ ಮಾರ್ತಾಂಡ ದ್ವಾರದ ಮೂಲಕ ಗಜಪಡೆಯನ್ನು ಅರಮನೆಗೆ ಸಂಪ್ರದಾಯಿಕವಾಗಿ ಸ್ವಾಗತಿಸಲಾಗುತ್ತದೆ. ಇದೇ ಮೂದಲ ಬಾರಿಗೆ ಸಂಜೆ ವೇಳೆ ಗಜಪಡೆಯನ್ನು ಅರಮನೆಗೆ ಸ್ವಾಗತ ಮಾಡುತ್ತಿರುವುದು ವಿಶೇಷ ಎನ್ನಲಾಗಿದೆ.
*ಗಜಪಡೆಗೆ ಸ್ನಾನ ಮಾಡಿಸಿದ ಮಾವುತರು, ಕಾವಾಡಿಗರು:* ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿರುವ ಗಜಪಡೆಗೆ ಮಾವುತರು ಹಾಗೂ ಕಾವಾಡಿಗರು ಸ್ನಾನ ಮಾಡಿಸಿದರು. ಆನೆಗಳಿಗೆ ಭತ್ತ, ಹಸಿ ಹುಲ್ಲನ್ನು ಮೇವಾಗಿ ನೀಡಲಾಗುತ್ತಿದೆ. ಸದ್ಯ ಗಜಪಡೆ ಹಾಗೂ ಮಾವುತರು, ಕಾವಾಡಿಗರು ಮತ್ತವರ ಕುಟುಂಬಸ್ಥರು ರಿಲ್ಯಾಕ್ಸ್​ ಮೂಡ್​ನಲ್ಲಿದ್ದಾರೆ.
*ದೂರದಿಂದಲೇ ಗಜಪಡೆ ನೋಡಲು ಜನರಿಗೆ ಅವಕಾಶ:* “ಕಾಡಿನಿಂದ ನಾಡಿಗೆ ಆಗಮಿಸಿದ ಗಜಪಡೆಗೆ ಆರೋಗ್ಯ‌ ತಪಾಸಣೆ ಮಾಡಲಾಗಿದ್ದು, ಅವುಗಳ ರಕ್ತ ಪರೀಕ್ಷೆಯನ್ನು ಸಹ ಮಾಡಲಾಗಿದೆ. ಎಲ್ಲ ಆನೆಗಳು ಈ ಹಿಂದೆ ದಸರಾದಲ್ಲಿ ಭಾಗವಹಿಸಿರುವ ಕಾರಣ ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು, ದೂರದಿಂದಲೇ ಗಜಪಡೆಯನ್ನ ನೋಡಲು ಜನರಿಗೆ ಅವಕಾಶ ಮಾಡಿಕೊಡಲಾಗಿದೆ.
ಗಜಪಡೆಗೆ ಈ ಎಲ್ಲ ಆಹಾರ ನೀಡಲಾಗುತ್ತೆ: ಗಜಪಡೆಗೆ ಭತ್ತ, ಹುಲ್ಲು ಸೇರಿದಂತೆ ಸಾಮಾನ್ಯ ಆಹಾರವನ್ನ ನೀಡಲಾಗುತ್ತಿದೆ. ಆ.10 ರಂದು ಗಜಪಡೆ ಅರಮನೆ ಪ್ರವೇಶ ಮಾಡುವ ಸಾಧ್ಯತೆ ಇದೆ. ನಂತರ ತಾಲೀಮು ಆರಂಭಿಸಲಾಗುವುದು” ಎಂದು ಮೈಸೂರಿನ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಭುಗೌಡ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು