11:12 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಎಸ್ಐಟಿ ಇನ್ಸ್ ಪೆಕ್ಟರ್ ಧರ್ಮಸ್ಥಳ ಗ್ರಾಪಂಗೆ ಭೇಟಿ: ಯುಡಿಆರ್ ದಾಖಲೆ, ಅಧಿಕಾರಿಗಳ ವಿವರ ಸಂಗ್ರಹ

06/08/2025, 18:11

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ 1995ರಿಂದ 2014ರ ವರೆಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳ ದಾಖಲೆಗಳನ್ನು ಸಂಗ್ರಹಿಸಲು ಇಂದು ವಿಶೇಷ ತನಿಖಾ ತಂಡದ (ಎಸ್ಐಟಿ) ಇನ್ಸ್ ಪೆಕ್ಟರೊಬ್ಬರು ಪಂಚಾಯಿತಿಗೆ ಭೇಟಿ ನೀಡಿದ್ದಾರೆ.
ಎಸ್ಐಟಿ ಇನ್ಸ್ ಪೆಕ್ಟರ್ ಸಂಪತ್ ಅವರು ಧರ್ಮಸ್ಥಳ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ವಿವರಗಳನ್ನು ಕಲೆ ಹಾಕಿದ್ದಾರೆ.
ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳ ವಿವರ ಹಾಗೂ ಅಸಹಜ ಸಾವಿನ(ಯುಡಿಆರ್) ದಾಖಲೆಗಳನ್ನು ಇನ್ಸ್ ಪೆಕ್ಟರ್ ಸಂಪತ್ ಅವರು ಸಂಗ್ರಹಿಸಿದ್ದಾರೆ.
ಅನಾಮಿಕ ದೂರುದಾರ ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ಆರಂಭಿಸಲಾಗಿದೆ. ದೂರುದಾರ ಕಾರ್ಮಿಕನು 1995ರಿಂದ 2014ರ ವರೆಗೆ ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೃತದೇಹವನ್ನು ಅಧಿಕಾರಿಗಳ ಸೂಚನೆ ಮೇರೆಗೆ ಗುಪ್ತವಾಗಿ ಹೂತಿಟ್ಟಿದ್ದಾಗಿ ಆರೋಪಿಸಿದ್ದಾನೆ. ಈ ಕುರಿತು ಜುಲೈ 4ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 19ರಂದು ಎಸ್ಐಟಿ ರಚನೆಯಾದ ಬಳಿಕ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು