8:59 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಮುತ್ತಿಗೆಪುರ ಗ್ರಾಮದಲ್ಲಿ ಕಾಡಾನೆ ದಾಳಿ; ಓರ್ವ ಗಂಭೀರ ಗಾಯ

06/08/2025, 19:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.
63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜಾನುವಾರುಗಳು ಬಂದಿರಬಹುದು ಎಂದು ಮನೆಯ ಹೊರಗೆ ಬಂದಿದ್ದಾರೆ.  ಮನೆಯಿಂದ ಹೊರಬಂದ ವೇಳೆ  ಮನೆಯ ಸಮೀಪವೆ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆ ಸೊಂಡಿಲಿನಿಂದ ಫಿಲಿಪ್ ಅವರನ್ನು ತೆಗೆದು ಎಸೆದಿದೆ. ಆನೆ ದಾಳಿಯಿಂದ ಕಾಲು, ಎದೆ ಹಾಗೂ ಕೈಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಿಲಿಪ್ ಕ್ಯಾಸ್ಟೋಲಿನಾ ಅವರು ಮುತ್ತಿಗೆಪುರ ನಿವಾಸಿಯಾಗಿದ್ದು, ಟ್ರಾಕ್ಟರ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ತನ್ನ ಪತ್ನಿ ಹಾಗೂ ಮಗನೊಂದಿಗೆ ವಾಸವಾಗಿದ್ದಾರೆ. ಇದೀಗ ಅವರು ತೀವ್ರ ಗಾಯಗೊಂಡಿದ್ದು ಮುಂದಿನ ದಿನಗಳಲ್ಲಿ ದುಡಿದು ತಿನ್ನುವುದಕ್ಕೆ ಕಷ್ಟವಾಗಿದೆ. ಆನೆ ದಾಳಿಯಿಂದ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ ಸುಮಾರು 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಅವು ನಿರಂತರವಾಗಿ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ತಾಲ್ಲೂಕಿನ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ, ಮುತ್ತಿಗೆಪುರ ಗ್ರಾಮಗಳ ಸುತ್ತಾ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವುಗಳನ್ನು ಕೇಳುವವರು ಇಲ್ಲದಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ, ಮಧ್ಯರಾತ್ರಿ ಹೊತ್ತಿಗೆ ಮೂಡಿಗೆರೆ ಅರಣ್ಯ ಅಧಿಕಾರಿ ಕಾವ್ಯ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಪ್ರಸ್ತುತ ಕಾಡಾನೆಗಳು ಕುನ್ನಹಳ್ಳಿ ಹಳಸೆ ಭಾಗದಲ್ಲಿ ಬೀಡುಬಿಟ್ಟಿದ್ದು, ಕಾಫಿ ತೋಟ, ಶುಂಠಿ ಗದ್ದೆಗಳಿಗೆ ಲಗ್ಗೆ ಇಟ್ಟಿವೆ. ಕುನ್ನಹಳ್ಳಿ ಚಂದ್ರಶೇಖರ್ ಎಂಬುವವರ ಗದ್ದೆಯಲ್ಲಿ ನಾಟಿ ಮಾಡಿದ್ದ ಶುಂಠಿ ಬೆಳೆಯನ್ನು ಸಂಪೂರ್ಣ ತುಳಿದು ನಾಶಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು