4:17 AM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

SIT | ಧರ್ಮಸ್ಥಳ: ಅಜಯ್ ಅಂಚನ್ ಸಹಿತ 4 ಮಂದಿ ಯೂಟ್ಯೂಬರ್ ಗಳ ಮೇಲೆ ಗೂಂಡಾಗಳ ಹಲ್ಲೆ; ಕೊಂಚ ಕಾಲ ಉದ್ವಿಗ್ನ ಸ್ಥಿತಿ

06/08/2025, 20:58

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಕುರಿತು ಎಸ್ಐಟಿ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದಂತೆ, ಇತ್ತ ಬುಧವಾರ ಸಂಜೆ 4 ಮಂದಿ ಯೂಟ್ಯೂಬರ್ ಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ಕೊಂಚ ಸಮಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.


ಕುಡ್ಲ ರಾಂಪೇಜ್ ನ ಅಜಯ್ ಅಂಚನ್ ಸೇರಿದಂತೆ ನಾಲ್ವರು ಯೂಟ್ಯೂಬರ್ ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿದೆ. ಗಾಯಾಳುಗಳನ್ನು ಉಜಿರೆ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಭಿಷೇಕ್ ಮತ್ತು ವಿಜಯ್ ಹಾಗೂ ಇನ್ನೊಬ್ಬರು ಇತರ ಮೂವರು ಹಲ್ಲೆಗೊಳಗಾದ ಯೂಟ್ಯೂಬರ್ ಗಳೆಂದು ತಿಳಿದು ಬಂದಿದೆ.
ಧರ್ಮಸ್ಥಳ ಗ್ರಾಮದ ಪಾಂಗಾಳ ಬಳಿ ಈ ನಾಲ್ವರು ಯೂಟ್ಯೂಬರ್ ಗಳ ಮೇಲೆ ಗೂಂಡಾಗಳ ತಂಡ ಹಲ್ಲೆ ನಡೆಸಿದೆ. ಅಜಯ್ ಅಂಚನ್ ಅವರನ್ನು ಸುತ್ತುವರಿದ ತಂಡ ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ.
ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು