1:10 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Mangaluru | ರೋಶನಿ ನಿಲಯಲ್ಲಿ ಅಮರ ಮಿಯಾವಾಕಿ ವನ ಉದ್ಘಾಟನೆ

06/08/2025, 23:38

ಮಂಗಳೂರು(reporterkarnataka.com): ಡಾ.ಒಲಿಂಡಾ ಪೆರೇರ ಅವರ ಶತಮಾನೋತ್ಸವ ಅಂಗವಾಗಿ ರೋಶನಿ ನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಇನ್‌ಸ್ಟಿಟ್ಯೂಷನ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ರೋಶನಿ ನಿಲಯ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಮಿಯಾವಾಕಿ ವನವನ್ನು ಲೋಕಾರ್ಪಣೆಗೊಳಿಸಲಾಯಿತು.
ಮುಖ್ಯ ಅತಿಥಿ, ಸಿಎಫ್‌ಎಎಲ್‌ನ ಸಂಶೋಧನಾ ನಿರ್ದೇಶಕಿ ಮತ್ತು ಎಎಂಎಆರ್‌ಆರ್‌ ಅಭಿಯಾನದ ಸಂಚಾಲಕಿ ಡಾ.ಸ್ಮಿತಾ ಹೆಗ್ಡೆ ಮಾತನಾಡಿ, ಇಂದು ಪರಿಸರದಲ್ಲಿ ಆಗುತ್ತಿರುವ ಪಲ್ಲಟಗಳು ಹಾಗೂ ಸುಸ್ಥಿರತೆಯನ್ನು ಸಾಧಿಸುವಲ್ಲಿ ನಮ್ಮೆಲ್ಲರ ವೈಯಕ್ತಿಕ ಹಾಗೂ ಸಾಮೂಹಿಕ ಪರಿಸರ ಪೂರಕ ಚಟುವಟಿಕೆಗಳ ಅಗತ್ಯದ ಕುರಿತು ಪ್ರತಿಪಾದಿಸಿ, ನಗರ ಪ್ರದೇಶಗಳಲ್ಲಿ ಹಸಿರು ಸ್ಥಳಗಳನ್ನು ಪುನರುತ್ಪಾದಿಸುವಲ್ಲಿ ಮಿಯಾವಾಕಿ ಅರಣ್ಯಗಳ ಪರಿಣಾಮಕಾರಿ ಅನುಷ್ಠಾನಗಳ ಅಗತ್ಯವನ್ನು ವಿವರಿಸಿದರು. ಪರಿಸರವಾದಿ ಜೀತ್ ಮಿಲನ್ ರೋಶ್‌ ಮಾತನಾಡಿ, ಮಿಯಾವಾಕಿ ಕಾಡುಗಳೆಂಬ ದಟ್ಟವಾದ ಮತ್ತು ವೇಗವಾಗಿ ಬೆಳೆಯುತ್ತಿರುವ ತೋಟಗಾರಿಕೆ ತಂತ್ರವು ನಗರ ಪ್ರದೇಶಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು, ಜೀವವೈವಿಧ್ಯತೆಯನ್ನು ಸುಧಾರಿಸಲು ಮತ್ತು ಸುಸ್ಥಿರ ಪರಿಸರ ವ್ಯವಸ್ಥೆಗಳನ್ನು ರಚಿಸಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ವಿವರಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್, ರೋಶನಿ ನಿಲಯ ನಿವೃತ್ತ ಪ್ರಾಂಶುಪಾಲೆ ಡಾ.ಜಸಿಂತಾ ಡಿಸೋಜ, ಅಮರ ಅಭಿಯಾನದ ಸಹ-ಸಂಚಾಲಕಿ ಅಶ್ವಿನಿ ಭಟ್, ಆರ್‌ಎಎ ಅಧ್ಯಕ್ಷ ಆನಂದ್ ಡಿಸಿಲ್ವ ಮತ್ತು ಹಳೇ ವಿದ್ಯಾರ್ಥಿ ಕಿಶೋರ್ ಅತ್ತಾವರ್ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರೊ.ಸಿಸಿಲಿಯಾ ಫರಿದಾ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ರೋಶನಿ ನಿಲಯದ ವಿಸ್ತರಣಾ ಸೇವಾ ಅಧಿಕಾರಿ ಡಾ.ಅನುಸೂಯಾ ಕಾಮತ್ ಸ್ವಾಗತಿಸಿದರು. ಎನ್ನೆಸ್ಸೆಸ್‌ ಕಾರ್ಯಕ್ರಮ ಅಧಿಕಾರಿ ಡಾ.ಪ್ರಶಾಂತ್ ಭಟ್‌ ವಂದಿಸಿದರು. ಬ್ರಿನೆಲ್ಲೆ ಡಿಯೋಲಾ ಫರ್ನಾಂಡಿಸ್ ಕಾರ್ಯ್ರಕಮ ನಿರ್ವಹಿಸಿದರು. ಅತಿಥಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ಮಿಯಾವಾಕಿ ಅರಣ್ಯ ವಿಧಾನ ಬಳಸಿಕೊಂಡು ಸಸಿಗಳನ್ನು ನೆಟ್ಟು ಅಭಿಯಾನದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು