2:27 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ರಾತ್ರಿ ವೇಳೆ ಕಾಡಾನೆ ದಾಳಿಗೆ ಚೆoಬು ಗ್ರಾಮದ ರೈತ ದಾರುಣ ಸಾವು

07/08/2025, 10:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕು ಚೆoಬು ಗ್ರಾಮದ ದಬ್ಬಡ್ಕ ಭಾಗದಲ್ಲಿ ಕಳೆದ ರಾತ್ರಿ 9 ಗಂಟೆಗೆ ಆನೆ ದಾಳಿಯಿಂದ ಸ್ಥಳೀಯ ಕೊಪ್ಪದ ಶಿವಪ್ಪ (72) ಎಂಬ ರೈತ ಮೃತಪಟ್ಟ ದಾರುಣ ಘಟನೆ ನಡೆದಿದೆ.
ರಾತ್ರಿ 8:30 ಗಂಟೆಗೆ ಕೊಪ್ಪದ ಶಿವಪ್ಪ ತನ್ನ ಮನೆಯ ಮುಂಭಾಗದಲ್ಲಿ ಸದ್ದು ಕೇಳಿ ಬಂದ ಹಿನ್ನೆಲೆಯಲ್ಲಿ ಮನೆಯಿಂದ ಹೊರಬಂದು ಮನೆಯ ಮುಂಭಾಗದಿಂದ 30 ಮೀಟರ್ ದೂರದಲ್ಲಿ ನಡೆದು ಕೊಂಡು ಹೋದಾಗ ಕಾಡಾನೆ ದಿಢೀರ್ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಆನೆ ದಾಳಿಯಿಂದ ಎದೆ ಭಾಗ ಹಾಗೂ ಬೆನ್ನಿನ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳು ಉಂಟಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭ ಶಿವಪ್ಪ ಮೃತಪಟ್ಟಿದ್ದಾರೆ.

ಘಟನೆ ಸುದ್ದಿ ತಿಳಿದೊಡನೆ ಶಾಸಕ ಎ. ಎಸ್. ಪೊನ್ನಣ್ಣನವರ ಸೂಚನೆ ಮೇರೆಗೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಶವವನ್ನು ಇರಿಸಿದ ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.
ಆನೆ ಹಾವಳಿಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದಾಗ ಅವರನ್ನು ಸಮಾಧಾನಪಡಿಸಿ ಶಾಸಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪರಿಣಾಮ ಕೂಡಲೇ ಆ ಭಾಗದಲ್ಲಿ ಇರುವ ಒಂದು ಪುಂಡಾನೆಯನ್ನು ಹಿಡಿಯಲು ಬೇಕಾದ ಎಲ್ಲಾ ಇಲಾಖೆ ಕಾನೂನುಗಳನ್ನು ಈಡೇರಿಸಿ ಶೀಘ್ರದಲ್ಲಿ ಆನೆ ಹಿಡಿಯಲು ಅನುಮತಿ ಕೊಡಿಸಿ ಕೊಡುವುದಾಗಿ ಶಾಸಕರು ಭರವಸೆ ನೀಡಿದ್ದಾರೆ ಎಂದು ಸಂಕೇತ್ ಪೂವಯ್ಯ ಹೇಳಿದ್ದಾರೆ.
ಆನೆ ಓಡಿಸುವ ಕಾರ್ಯಾಚರಣೆ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಈಗಾಗಲೇ ಸೂಚಿಸಿದರಲ್ಲದೆ ಅರಣ್ಯ ಇಲಾಖೆಗೆ ಹೆಚ್ಚು ಸಿಬ್ಬಂದಿ ಒದಗಿಸುವ ಭರವಸೆಯನ್ನು ಶಾಸಕರು ನೀಡಿದ್ದಾರೆ ಎಂದು ಗ್ರಾಮಸ್ಥರಿಗೆ ಸಂಕೇತ್ ಪೂವಯ್ಯ ಭರವಸೆಯನ್ನು ಈ ಸಂದರ್ಭ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು