1:03 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ

07/08/2025, 11:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ
ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು.
ದಲಿತ ಸಂಘರ್ಷ ಸಮಿತಿ, ಪ್ರಗತಿಪರರು, ರೈತ ಸಂಘದಿಂದ ಪ್ರಾಯಶ್ಚಿತ್ತ ಮೌನ ಪ್ರತಿಭಟನೆ ಜರುಗಿತು.
ಶಾಸಕಿ ನಯನಾ ಮೋಟಮ್ಮ ಗೆಲುವಿಗೆ ಶ್ರಮಿಸಿ ತಪ್ಪು ಮಾಡಿದ್ದೇವೆಂದು ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು.
ಚಿಕ್ಕಮಗಳೂರು ನಗರದ ಕೋರ್ಟ್ ಆವರಣದಲ್ಲಿರುವ
ಗಾಂಧಿ ಪ್ರತಿಮೆ ಎದುರು ದಲಿತ ಸಂಘ, ಪ್ರಗತಿಪರರು, ರೈತರು ಮೌನ ಧರಣಿ ನಡೆಸಿದರು.
ಕೇಸರಿ ಶಾಲು ತೊಟ್ಟು ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ನಯನಾ ಮೋಟಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಸರಿ ಶಾಲು ತೊಟ್ಟು 3 ವರ್ಷ ಆದ ಮೇಲೆ ಬಿಜೆಪಿ ಹೋಗ್ತೀನೋ… ಕಾಂಗ್ರೆಸ್ಸಲ್ಲೇ ಇರ್ತಿನೋ ಗೊತ್ತಿಲ್ಲ ಎಂದಿದ್ದ ನಯನಾ ಮೋಟಮ್ಮ.


ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದರು.
ಅನ್ಯ ಧರ್ಮದ ಮೇಲೆ ದ್ವೇಷ ಕಾರುವ ಪ್ರಮೋದ್ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದ್ದಾರೆ.
48ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರೋ ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಕಿಡಿ ಕಾರಿದ್ದಾರೆ.
ಇಂತವರ ಗೆಲುವಿಗೆ ಶ್ರಮಿಸಿದ್ವಲ್ಲಾ ಅಂತ ಗಾಂಧಿ ಪ್ರತಿಮೆ ಎದುರು ಪ್ರಾಯಶ್ಚಿತ್ತ ಮಾಡಿಕೊಂಡರು.
ಅವರಿಗೆ ಮತ ಹಾಕಿ, ಹಾಕಿಸಿ ತಪ್ಪು ಮಾಡಿದ್ದೇವೆಂದು ನೊಂದು ಗಾಂಧಿ ಎದುರು ಪ್ರಾಯಶ್ಚಿತ್ತ ಮೌನ ಧರಣಿ ನಡೆಸಿದರು.
ನಯನಾ ಮೋಟಮ್ಮ ಮಾಜಿ‌ ಸಚಿವೆ ಮೋಟಮ್ಮ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು