5:16 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರಗಳ ಪತ್ತೆಗೆ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್ ತಂತ್ರಜ್ಞಾನ ಬಳಕೆಗೆ ಎಸ್ಐಟಿ ಸಿದ್ದತೆ

07/08/2025, 14:00

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅಸ್ತಿಪಂಜರಗಳ ಪತ್ತೆಗಾಗಿ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್(ಜಿಪಿಆರ್) ತಂತ್ರಜ್ಞಾನ ಬಳಸುವ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಐಟಿ ಈಗಾಗಲೇ 12 ಸ್ಪಾಟ್ ಗಳ ಉತ್ಖನನ ಕಾರ್ಯ ಪೂರ್ಣಗೊಳಿಸಿದೆ. ಬಂಗ್ಲಗುಡ್ಡೆಯಲ್ಲಿ ಅಸ್ತಿಪಂಜರ ದೊರೆತ ಬಳಿಕ 13ನೇ ಸ್ಪಾಟ್ ಉತ್ಖನನಕ್ಕೆ ಜಿಪಿಆರ್ ತಂತ್ರಜ್ಞಾನ ಬಳಕೆಗೆ ಸಿದ್ದತೆ ನಡೆಸಿದೆ.
ಸ್ಪಾಟ್ ನಂಬರ್ 13ರಲ್ಲಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಸಂಪರ್ಕದ ವಯರ್ ಗಳು ಹಾದು ಹೋಗಿರುವುದರಿಂದ ಇಲ್ಲಿ ಮಾನವ ಶ್ರಮದ ಮೂಲಕ ಅಥವಾ ಹಿಟಾಚಿ ಬಳಕೆ ಸ್ವಲ್ಪ ಕಷ್ಟಕರವೆನಿಸಿದೆ. ಅದಲ್ಲದೆ ಬಂಗ್ಲಗುಡ್ಡೆಯಲ್ಲಿ ಇನ್ನಷ್ಟು ಶೋಧಕ್ಕೆ ಆಧುವಿಕ ತಂತ್ರಜ್ಞಾನದ ಬಳಕೆಗೆ ಎಸ್ಐಟಿ ಮುಂದಾಗಿ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು