10:17 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರಗಳ ಪತ್ತೆಗೆ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್ ತಂತ್ರಜ್ಞಾನ ಬಳಕೆಗೆ ಎಸ್ಐಟಿ ಸಿದ್ದತೆ

07/08/2025, 14:00

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅಸ್ತಿಪಂಜರಗಳ ಪತ್ತೆಗಾಗಿ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್(ಜಿಪಿಆರ್) ತಂತ್ರಜ್ಞಾನ ಬಳಸುವ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಐಟಿ ಈಗಾಗಲೇ 12 ಸ್ಪಾಟ್ ಗಳ ಉತ್ಖನನ ಕಾರ್ಯ ಪೂರ್ಣಗೊಳಿಸಿದೆ. ಬಂಗ್ಲಗುಡ್ಡೆಯಲ್ಲಿ ಅಸ್ತಿಪಂಜರ ದೊರೆತ ಬಳಿಕ 13ನೇ ಸ್ಪಾಟ್ ಉತ್ಖನನಕ್ಕೆ ಜಿಪಿಆರ್ ತಂತ್ರಜ್ಞಾನ ಬಳಕೆಗೆ ಸಿದ್ದತೆ ನಡೆಸಿದೆ.
ಸ್ಪಾಟ್ ನಂಬರ್ 13ರಲ್ಲಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಸಂಪರ್ಕದ ವಯರ್ ಗಳು ಹಾದು ಹೋಗಿರುವುದರಿಂದ ಇಲ್ಲಿ ಮಾನವ ಶ್ರಮದ ಮೂಲಕ ಅಥವಾ ಹಿಟಾಚಿ ಬಳಕೆ ಸ್ವಲ್ಪ ಕಷ್ಟಕರವೆನಿಸಿದೆ. ಅದಲ್ಲದೆ ಬಂಗ್ಲಗುಡ್ಡೆಯಲ್ಲಿ ಇನ್ನಷ್ಟು ಶೋಧಕ್ಕೆ ಆಧುವಿಕ ತಂತ್ರಜ್ಞಾನದ ಬಳಕೆಗೆ ಎಸ್ಐಟಿ ಮುಂದಾಗಿ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು