5:34 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರಗಳ ಪತ್ತೆಗೆ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್ ತಂತ್ರಜ್ಞಾನ ಬಳಕೆಗೆ ಎಸ್ಐಟಿ ಸಿದ್ದತೆ

07/08/2025, 14:00

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅಸ್ತಿಪಂಜರಗಳ ಪತ್ತೆಗಾಗಿ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್(ಜಿಪಿಆರ್) ತಂತ್ರಜ್ಞಾನ ಬಳಸುವ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಐಟಿ ಈಗಾಗಲೇ 12 ಸ್ಪಾಟ್ ಗಳ ಉತ್ಖನನ ಕಾರ್ಯ ಪೂರ್ಣಗೊಳಿಸಿದೆ. ಬಂಗ್ಲಗುಡ್ಡೆಯಲ್ಲಿ ಅಸ್ತಿಪಂಜರ ದೊರೆತ ಬಳಿಕ 13ನೇ ಸ್ಪಾಟ್ ಉತ್ಖನನಕ್ಕೆ ಜಿಪಿಆರ್ ತಂತ್ರಜ್ಞಾನ ಬಳಕೆಗೆ ಸಿದ್ದತೆ ನಡೆಸಿದೆ.
ಸ್ಪಾಟ್ ನಂಬರ್ 13ರಲ್ಲಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಸಂಪರ್ಕದ ವಯರ್ ಗಳು ಹಾದು ಹೋಗಿರುವುದರಿಂದ ಇಲ್ಲಿ ಮಾನವ ಶ್ರಮದ ಮೂಲಕ ಅಥವಾ ಹಿಟಾಚಿ ಬಳಕೆ ಸ್ವಲ್ಪ ಕಷ್ಟಕರವೆನಿಸಿದೆ. ಅದಲ್ಲದೆ ಬಂಗ್ಲಗುಡ್ಡೆಯಲ್ಲಿ ಇನ್ನಷ್ಟು ಶೋಧಕ್ಕೆ ಆಧುವಿಕ ತಂತ್ರಜ್ಞಾನದ ಬಳಕೆಗೆ ಎಸ್ಐಟಿ ಮುಂದಾಗಿ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು