2:26 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ

07/08/2025, 19:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇರುವ ರಾಂಪುರ ಹಳೆಯ ಸೇತುವೆಯ ನದಿ ತೀರದಲ್ಲಿ ನೀರು ನಾಯಿಗೆ ಬೇಟೆಯಾಡಲು ಬಳಸುವ ಬೋನುಗಳನ್ನು ಇರಿಸುತ್ತಿದ್ದ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ.


ಸಾಮಾಜಿಕ ಕಾರ್ಯಕರ್ತರು ಕಾರ್ಯನಿಮಿತ ರಾಂಪುರ ಮಾರ್ಗದಿಂದ ಶ್ರೀರಂಗಪಟ್ಟಣಕ್ಕೆ ಬರುವ ಸೇತುವೆಯ ಮೇಲ್ಬಾಗದಿಂದ ಬೋನ್ ಗಳನ್ನು ಗಮನಿಸಿದ್ದಾರೆ. ಶ್ರೀರಂಗಪಟ್ಟಣ ಚಂದನ್ ನೇತ್ರತ್ವದಲ್ಲಿ ಬೋನ್ ಹಾಕುತ್ತಿರುವ ವ್ಯಕ್ತಿಯನ್ನು ವಿಚಾರಿಸಿದಾಗ ಮೀನು ಹಿಡಿಯಲು ಬೋನ್ ಹಾಕುತ್ತಿದ್ದೇವೆ ಎಂದು ಹೇಳಿದ ತಕ್ಷಣದಲ್ಲೇ ಶ್ರೀರಂಗಪಟ್ಟಣ ಹಿರಿಯ ಸ್ವಯಂ ಸೇವಕರಾದ ಲಕ್ಷ್ಮೀನಾರಾಯಣ, ಕರವೇ ತಾಲೂಕು ಅಧ್ಯಕ್ಷರಾದ ಚಂದ್ಗಾಲ್ ಶಂಕ್ರಣ್ಣ ಪೈಲ್ವಾನ್ ಸತೀಶ್ , ಗಂಜಾಂ ಮೀನುಗಾರರ ಸೊಸೈಟಿಯ ನಿರ್ದೇಶಕರಾದ ಶ್ರೀಯುತ ಗುಲ್ಕನ್ ರಾಮಣ್ಣ ಸಮ್ಮುಖದಲ್ಲಿ ಈ ಅಕ್ರಮವನ್ನು ತಕ್ಷಣದಲ್ಲಿ ಶ್ರೀರಂಗಪಟ್ಟಣ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಅರಣ್ಯ ಇಲಾಖೆಯ ವಾಚರ್ ಗಳಾದ ಬಸವರಾಜುರವರು ಹಾಗೂ ತುಳಸಿ ರವರು ಖುದ್ದು ಸ್ಥಳಕ್ಕೆ ಬಂದು ಬೋನ್ ಗಳನ್ನು ಸೀಜ್ ಮಾಡಿ ದೂರು ದಾಖಲಿಸುವಂತೆ ಒತ್ತಾಯಿಸಲಾಯಿತು. ಹುಲಿಯಷ್ಟೇ ಪ್ರಾಮುಖ್ಯತೆ ಉಳ್ಳ ನೀರು ನಾಯಿಗಳ ಉಳಿವು ಸಾರ್ವಜನಿಕರ ಕರ್ತವ್ಯದೊಂದಿಗೆ ಅರಣ್ಯ ಇಲಾಖೆಯ ಕರ್ತವ್ಯವು ಹೌದು ಹಾಗೂ ಈ ರೀತಿ ಮೀನುಗಾರರ ಸಂಘದವರು ಎಂದು ಹೇಳಿಕೊಂಡು ಬೋನ್ ಗಳನ್ನು ಇರಿಸುವವರಿಗೆ ಮೀನುಗಾರರ ಸಂಘದಿಂದ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿ ಪರಿಸರದ ನದಿ ತೀರದ ಜಲಚರ ಪ್ರಾಣಿಗಳನ್ನು ಉಳಿವಿಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮವಾಗಬೇಕೆಂದು ಒತ್ತಾಯಿಸಿದರು. ಶ್ರೀರಂಗಪಟ್ಟಣದ ನದಿ ತೀರದಲ್ಲಿ ರಾತ್ರಿಯ ವೇಳೆ ಅತಿ ಹೆಚ್ಚು ನೀರು ನಾಯಿ ಬೇಟೆಯಾಡುವ ಕಳ್ಳ ಬೇಟೆಗಾರರು ತಡೆಯಲು ಕ್ರಮಸೂಚಿಸುವಂತೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಲಾಯಿತು. ಕಳೆದ ಏಳು ವರ್ಷದಲ್ಲಿ ಇದೇ ರೀತಿ ಕಳ್ಳ ಬೇಟೆಯಾಡಲು ಪ್ರಯತ್ನಿಸಿದವರನ್ನು ಅರಣ್ಯ ಇಲಾಖೆ ಗಮನಕ್ಕೆ ತಂದು ಎಫ್ಐಆರ್ ಕೂಡ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು