6:50 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಇನ್ನಷ್ಟು ಅಧಿಕಾರ; ಪೊಲೀಸ್ ಠಾಣೆ ಮಾದರಿಯಲ್ಲಿ ಕಾರ್ಯನಿರ್ವಹಣೆ

08/08/2025, 18:42

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರಕಾರ ಹೆಚ್ಚಿನ‌ ಅಧಿಕಾರ ನೀಡುವ ಮೂಲಕ ಇನ್ನಷ್ಟು ಪವರ್ ಬಂದಿದೆ.
ಎಸ್ಐಟಿ ತಂಡ ಪೊಲೀಸ್ ಠಾಣೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಎಸ್ಐಟಿ ಸ್ವತಃ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿಕೊಳ್ಳಬಹುದು. ಈ ಹಿಂದೆ ಜಯನ್ ಅವರು ದೂರು ನೀಡಲು ಬಂದಾಗ ಮೊದಲಿಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿ ಬರುವಂತೆ ಸೂಚಿಸಲಾಗಿತ್ತು. ಇನ್ನು ಮುಂದೆ ಎಸ್ಐಟಿಯೇ ಎಫ್ಐಆರ್ ದಾಖಲಿಸಿಕೊಳ್ಳಬಹುದು. ತನಿಖೆಗೆ ಅವಶ್ಯಕತೆ ಇದ್ದವರನ್ನು ವಶಕ್ಕೆ ಪಡೆಯುವುದು, ಬಂಧಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು, ಕೋರ್ಟ್ ಗೆ ಪ್ರಾಥಮಿಕ ವರದಿ ಸಲ್ಲಿಸುವುದು ಮುಂತಾದ ಅಧಿಕಾರ ಪ್ರಾಪ್ತಿಯಾಗಿದೆ. ಪೊಲೀಸ್ ಠಾಣೆ ರೀತಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು