6:24 PM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

Chikkamagaluru | ರಾಜ್ಯದಲ್ಲಿ ಮತ್ತೊಂದು ಹುಲಿ ಸಾವು: ಎರಡು ವ್ಯಾಘ್ರಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ

08/08/2025, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ‌ ಮತ್ತೊಂದು ಹುಲಿ ಸಾವನ್ನಪ್ಪಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆ‌ಯಾಗಿದೆ.
ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಭದ್ರಾ ಅಭಯಾರಣ್ಯದ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗಸ್ತು ತಿರುಗುತ್ತಿದ್ದ ಸಿಬ್ಬಂದಿಗಳ ಕಣ್ಣಿಗೆ ಹುಲಿಯ ಕಳೆಬರಹ ಬಿದ್ದಿದೆ. ಸುಮಾರು 7 ವರ್ಷ ಪ್ರಾಯದ ಹೆಣ್ಣು ಹುಲಿಯ ಮೃತದೇಹ ಇದಾಗಿದೆ.ಎರಡು ಹುಲಿಗಳ ಮಧ್ಯೆ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಮೃತಪಟ್ಟಿರುವ ಹುಲಿಯ ದೇಹದ ಮೇಲೆ ಕಾದಾಟ ನಡೆಸಿರುವ ಗಾಯದ ಗುರುತು ಪತ್ತೆಯಾಗಿದೆ.
ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ರಕ್ತ ಮಾದರಿ, ದೇಹದ ಕೆಲ ಭಾಗ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು