2:22 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Mangaluru | ಆ.10: ಕಲಾಸಾಧನದಿಂದ ‘ಸ್ವರಧಾರ’ ಸಂಗೀತ ಉತ್ಸವ

08/08/2025, 22:16

ಮಂಗಳೂರು(reporterkarnataka.com): ಮಂಗಳೂರು ಕಲಾ ಸಾಧನ ವತಿಯಿಂದ
ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5 ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ.
ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಸಂಗೀತ ನಾಟಕ ಅಕಾಡೆಮಿ ನವದೆಹಲಿಯಿಂದ ಭಾರತರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್, ಯುವ ಪುರಸ್ಕಾರ ಪಂಡಿತ್ ಕುಮಾರ್ ಮರ್ದೂರ್ ಭಾಗವಹಿಸಲಿದ್ದಾರೆ. ಕುಮಾರ್ ಅವರು ಕಿರಾಣಾ, ಗ್ವಾಲಿಯರ್ ಮತ್ತು ಜೈಪುರ ಘರಾಣೆಗಳ ಶೈಲಿಗಳನ್ನು ಬೆರೆಸಿ ತಮ್ಮದೇ ಆದ ಗಾಯನವನ್ನು ರಚಿಸಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದವರು. ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಸೋಮನಾಥ ಮರ್ದೂರರ ಫುತ್ರ.


ಕುಮಾರ್ 2011ರಿಂದ 2021 ರವರೆಗೆ 10 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ-ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಬೋಧನಾ ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ, ಸಿಂಗಾಪುರ, ಬಾಂಗ್ಲಾ ದೇಶಗಳಲ್ಲಿ ಕಾರ್ಯ ನೀಡಿ ಖ್ಯಾತಿ ಪಡೆದವರು. ಉತ್ಸವದಲ್ಲಿ ಅಕ್ಷಯ ಜೋಶಿ ಧಾರವಾಡ್ ತಬಲಾ ಮತ್ತು ಸತೀಶ್ ಭಟ್ ಹೆಗ್ಗಾರ್ ಹಾರ್ಮೊನಿಯಂ ಸಾಥ್ ನೀಡಲಿದ್ದಾರೆ ಎಂದು ಕಲಾ ಸಾಧನ ಕೇಂದ್ರದ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೆರವೇರಿಸಲಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು