2:05 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಸಂಭ್ರಮ- ಸಡಗರದಿಂದ ವರಮಹಾಲಕ್ಷ್ಮೀ ಹಬ್ಬ ಸಂಪನ್ನ: ಸಮೃದ್ಧಿ, ಆರೋಗ್ಯಕ್ಕಾಗಿ ದೇವಿಗೆ ಪ್ರಾರ್ಥನೆ

08/08/2025, 22:59

ಮಂಗಳೂರು(reporterkarnataka.com): ಸಮೃದ್ಧಿ, ಆರೋಗ್ಯ ಮತ್ತು ಕುಟುಂಬದ ಯೋಗಕ್ಷೇಮಕ್ಕಾಗಿ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಕೋರಿ ಶುಕ್ರವಾರ ನಗರಾದ್ಯಂತ ವರಮಹಾಲಕ್ಷ್ಮಿ ಪೂಜೆ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲ್ಪಟ್ಟಿತು.



ಮಂಗಳೂರಿನ ಪ್ರಮುಖ ದೇವಸ್ಥಾನಗಳಾದ ಊರ್ವ ಮಾರಿಗುಡಿ, ಮಂಗಳಾದೇವಿ ದೇವಸ್ಥಾನ, ಕಾಳಿಕಾಂಬಾ ದೇವಸ್ಥಾನ, ಕುದ್ರೋಳಿ ದೇಗುಲ, ಉಡುಪಿ ಜಿಲ್ಲೆಯ ಕಾಪು ಮಾರಿಯಮ್ಮ ದೇವಸ್ಥಾನ ಮೊದಲಾದ ದೇವಸ್ಥಾನಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಈ ಆಚರಣೆಯಲ್ಲಿ ಮಹಿಳೆಯರು ಕಲಶಗಳನ್ನು ಅಕ್ಕಿ, ಮಾವಿನ ಎಲೆಗಳು, ತೆಂಗಿನಕಾಯಿ, ಹೂವುಗಳು, ಆಭರಣಗಳು ಮತ್ತು ನಾಣ್ಯ ಮಾಲೆಗಳಿಂದ ಅಲಂಕರಿಸಿದರು. ಮೊದಲು ಗಣಪತಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಅಲಂಕರಿಸಿದ ವಿಗ್ರಹದ ರೂಪದ ದೇವಿಯನ್ನು ಪೂಜಿಸಲಾಯಿತು.
ಉರ್ವಾ ಮಾರಿಗುಡಿ ದೇವಸ್ಥಾನದಲ್ಲಿ ಸಾಮುದಾಯಿಕ ಆಚರಣೆಗಳು ನಡೆದವು. ಸಾಂಪ್ರದಾಯಿಕ ಖಾದ್ಯಗಳಾದ ಒಬ್ಬಟ್ಟು, ಹುಳಿಯಣ್ಣ ಮತ್ತು ಪಾಯಸವು ಈ ಸಂದರ್ಭಕ್ಕೆ ಮೆರುಗು ನೀಡಿತು. ಹಬ್ಬ ಆಚರಣೆಯಲ್ಲಿ ತೊಡಗಿದ ಸಹಸ್ರಾರು ಸಂಖ್ಯೆಯ ಭಕ್ತರು ಸಿಹಿತಿಂಡಿಗಳು, ಹೂವುಗಳು ಮತ್ತು ಪ್ರಸಾದವನ್ನು ಹಂಚಿದರು.

ಇತ್ತೀಚಿನ ಸುದ್ದಿ

ಜಾಹೀರಾತು