9:23 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಗಯಾನಾ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಕೊಡಗಿನ ಗಿರೀಶ್ ಪಾಲೆ ಮೃತದೇಹ ಕೊನೆಗೂ ತಾಯ್ನಾಡಿಗೆ ಆಗಮನ

09/08/2025, 19:23

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿಯಾದ ಪಿ.ಬಿ ಗಿರೀಶ ಬಾಬು ಪಾಲೆ ರವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶರಿಫ್ ಜನರಲ್ ಆಸ್ಪತ್ರೆಯಲ್ಲಿ ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ ಜುಲೈ 14, 2025 ರಂದು ಸಾವನ್ನಪ್ಪಿದ್ದು, ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಿ.ಬಿ. ಗಿರೀಶ ಬಾಬು ಪಾಲೆ ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರುವ ಕ್ರಮವಹಿಸಲಾಗಿತ್ತು.
ಕರ್ನಾಟಕ ಸರ್ಕಾರದ ವತಿಯಿಂದ ರೂ 3.6 ಲಕ್ಷವನ್ನು ಮಂಜೂರು ಮಾಡಿದ್ದು, ಉಳಿಕೆ ಹಣವನ್ನು ಪಿ.ಬಿ.ಗಿರೀಶ ಬಾಬು ಪಾಲೆ ರವರು ಕೆಲಸ ಮಾಡುತ್ತಿದ್ದ ಶೆರಿಫ್ ಜನರಲ್ ಆಸ್ಪತ್ರೆಯವರು ಭರಿಸಿರುತ್ತಾರೆ. ಗಯಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹಾಗೂ ನವ ದೆಹಲಿಯಲ್ಲಿರುವ ನಿವಾಸಿ ಆಯುಕ್ತರು ಮೃತದೇಹವನ್ನು ಭಾರತಕ್ಕೆ ತರುವುದನ್ನು ಸಂಯೋಜಿಸಿ ಆಗಸ್ಟ್ 5, 2025ರ ರಾತ್ರಿ 11:30 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.
ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿಕೃಷ್ಣ ಮತ್ತು ಸಿಬ್ಬಂದಿ ಮೃತದೇಹವನ್ನು ಸ್ವೀಕರಿಸಿ ಮೃತರ ಪತ್ನಿ ಜಾನಕಿ ರವರಿಗೆ ಹಸ್ತಾಂತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು