8:54 PM Tuesday12 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನ: 124 ಚರ್ಚ್ ಗಳು ಭಾಗಿ

10/08/2025, 19:04

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನವು ಭಾನುವಾರ ನಗರದ ಕೋರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ 124 ಚರ್ಚ್ ಗಳ 1100 ಜನರು ಭಾಗವಹಿಸಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ಗುರು ಅತಿ ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಮೂಲ ಧರ್ಮ ಸಭೆ ಸಮುದಾಯ ರಾಜ್ಯ ಮಟ್ಟದ ಕಾರ್ಯದರ್ಶಿ ವಂದನೀಯ ಫಾ. ಮ್ಯಾಕ್ಸಿಮ್ ಡಯಾಸ್ ಮುಖ್ಯ ಅತಿಥಿಯಾಗಿದ್ದರು.

ಮುಖ್ಯ ನಿರ್ದೇಶಕರಾದ ವಂದನೀಯ ಫಾ. ಸುನಿಲ್ ಡಿ ಸೋಜಾ, ಕೋರ್ಡೆಲ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಿಲ್ವಿಯಾ ರೂತ್ ಕ್ಯಾಸ್ತಲಿನೊ, ಕಾರ್ಯದರ್ಶಿ ಅನಿಲ್ ಡೇಸಾ, ಸರ್ವ ಆಯೋಗಗಳ ಸಂಚಾಲಕ ಡಾಲ್ಫಿ ಡಿ ಸೋಜಾ, ಮೂಲ ಧರ್ಮ ಸಭೆಯ ಸಮುದಾಯದ ಕೋರ್ಡೆಲ್ ಚರ್ಚ್ ಸಂಚಾಲಕಿ ಜೂಲಿಯೆಟ್ ಮಿನೇಜಸ್, ಪ್ರಾಂತ್ಯ ಕಾರ್ಯದರ್ಶಿ ಆಶಾ ಮೊಂತೇರೊ ಅವರು ಉಪಸ್ಥಿತರಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಸರ್ವ ಆಯೋಗಗಳ ಸಂಚಾಲಕ ವಂದನೀಯ ಫಾ. ನವೀನ್ ಪಿಂಟೊ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮೂಲ ಧರ್ಮ ಸಭೆಯ ಸಮುದಾಯದ ಮಹತ್ವವನ್ನು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಕೋರ್ಡೆಲ್ ಚರ್ಚ್ ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಮೂಲ ಧರ್ಮ ಸಭೆಯ ಆಧ್ಯಾತ್ಮಿಕತೆಯನ್ನು ಈಗಿನ ಕ್ರೈಸ್ತರಲ್ಲಿ ಹೇಗೆ ಅಳವಡಿಸಿಕೊಳ್ಳ ಬಹುದೆಂದು ವಿವರಿಸಿದರು.
ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯನ್ನು ನಡೆಸಿ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ವಂದನೀಯ ಫಾ. ಸುನಿಲ್ ಡಿ ಸೋಜಾ ಸ್ವಾಗತಿಸಿ ಆಶಾ ಮೊಂತೇರೊ ವಂದಿಸಿದರು. ತೆರೆಸಾ ಕಾರ್ಡೋಜಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು