6:06 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನ: 124 ಚರ್ಚ್ ಗಳು ಭಾಗಿ

10/08/2025, 19:04

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನವು ಭಾನುವಾರ ನಗರದ ಕೋರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ 124 ಚರ್ಚ್ ಗಳ 1100 ಜನರು ಭಾಗವಹಿಸಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ಗುರು ಅತಿ ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಮೂಲ ಧರ್ಮ ಸಭೆ ಸಮುದಾಯ ರಾಜ್ಯ ಮಟ್ಟದ ಕಾರ್ಯದರ್ಶಿ ವಂದನೀಯ ಫಾ. ಮ್ಯಾಕ್ಸಿಮ್ ಡಯಾಸ್ ಮುಖ್ಯ ಅತಿಥಿಯಾಗಿದ್ದರು.

ಮುಖ್ಯ ನಿರ್ದೇಶಕರಾದ ವಂದನೀಯ ಫಾ. ಸುನಿಲ್ ಡಿ ಸೋಜಾ, ಕೋರ್ಡೆಲ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಿಲ್ವಿಯಾ ರೂತ್ ಕ್ಯಾಸ್ತಲಿನೊ, ಕಾರ್ಯದರ್ಶಿ ಅನಿಲ್ ಡೇಸಾ, ಸರ್ವ ಆಯೋಗಗಳ ಸಂಚಾಲಕ ಡಾಲ್ಫಿ ಡಿ ಸೋಜಾ, ಮೂಲ ಧರ್ಮ ಸಭೆಯ ಸಮುದಾಯದ ಕೋರ್ಡೆಲ್ ಚರ್ಚ್ ಸಂಚಾಲಕಿ ಜೂಲಿಯೆಟ್ ಮಿನೇಜಸ್, ಪ್ರಾಂತ್ಯ ಕಾರ್ಯದರ್ಶಿ ಆಶಾ ಮೊಂತೇರೊ ಅವರು ಉಪಸ್ಥಿತರಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಸರ್ವ ಆಯೋಗಗಳ ಸಂಚಾಲಕ ವಂದನೀಯ ಫಾ. ನವೀನ್ ಪಿಂಟೊ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮೂಲ ಧರ್ಮ ಸಭೆಯ ಸಮುದಾಯದ ಮಹತ್ವವನ್ನು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಕೋರ್ಡೆಲ್ ಚರ್ಚ್ ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಮೂಲ ಧರ್ಮ ಸಭೆಯ ಆಧ್ಯಾತ್ಮಿಕತೆಯನ್ನು ಈಗಿನ ಕ್ರೈಸ್ತರಲ್ಲಿ ಹೇಗೆ ಅಳವಡಿಸಿಕೊಳ್ಳ ಬಹುದೆಂದು ವಿವರಿಸಿದರು.
ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯನ್ನು ನಡೆಸಿ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ವಂದನೀಯ ಫಾ. ಸುನಿಲ್ ಡಿ ಸೋಜಾ ಸ್ವಾಗತಿಸಿ ಆಶಾ ಮೊಂತೇರೊ ವಂದಿಸಿದರು. ತೆರೆಸಾ ಕಾರ್ಡೋಜಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು