9:20 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನ: 124 ಚರ್ಚ್ ಗಳು ಭಾಗಿ

10/08/2025, 19:04

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನವು ಭಾನುವಾರ ನಗರದ ಕೋರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ 124 ಚರ್ಚ್ ಗಳ 1100 ಜನರು ಭಾಗವಹಿಸಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ಗುರು ಅತಿ ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಮೂಲ ಧರ್ಮ ಸಭೆ ಸಮುದಾಯ ರಾಜ್ಯ ಮಟ್ಟದ ಕಾರ್ಯದರ್ಶಿ ವಂದನೀಯ ಫಾ. ಮ್ಯಾಕ್ಸಿಮ್ ಡಯಾಸ್ ಮುಖ್ಯ ಅತಿಥಿಯಾಗಿದ್ದರು.

ಮುಖ್ಯ ನಿರ್ದೇಶಕರಾದ ವಂದನೀಯ ಫಾ. ಸುನಿಲ್ ಡಿ ಸೋಜಾ, ಕೋರ್ಡೆಲ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಿಲ್ವಿಯಾ ರೂತ್ ಕ್ಯಾಸ್ತಲಿನೊ, ಕಾರ್ಯದರ್ಶಿ ಅನಿಲ್ ಡೇಸಾ, ಸರ್ವ ಆಯೋಗಗಳ ಸಂಚಾಲಕ ಡಾಲ್ಫಿ ಡಿ ಸೋಜಾ, ಮೂಲ ಧರ್ಮ ಸಭೆಯ ಸಮುದಾಯದ ಕೋರ್ಡೆಲ್ ಚರ್ಚ್ ಸಂಚಾಲಕಿ ಜೂಲಿಯೆಟ್ ಮಿನೇಜಸ್, ಪ್ರಾಂತ್ಯ ಕಾರ್ಯದರ್ಶಿ ಆಶಾ ಮೊಂತೇರೊ ಅವರು ಉಪಸ್ಥಿತರಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಸರ್ವ ಆಯೋಗಗಳ ಸಂಚಾಲಕ ವಂದನೀಯ ಫಾ. ನವೀನ್ ಪಿಂಟೊ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮೂಲ ಧರ್ಮ ಸಭೆಯ ಸಮುದಾಯದ ಮಹತ್ವವನ್ನು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಕೋರ್ಡೆಲ್ ಚರ್ಚ್ ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಮೂಲ ಧರ್ಮ ಸಭೆಯ ಆಧ್ಯಾತ್ಮಿಕತೆಯನ್ನು ಈಗಿನ ಕ್ರೈಸ್ತರಲ್ಲಿ ಹೇಗೆ ಅಳವಡಿಸಿಕೊಳ್ಳ ಬಹುದೆಂದು ವಿವರಿಸಿದರು.
ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯನ್ನು ನಡೆಸಿ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ವಂದನೀಯ ಫಾ. ಸುನಿಲ್ ಡಿ ಸೋಜಾ ಸ್ವಾಗತಿಸಿ ಆಶಾ ಮೊಂತೇರೊ ವಂದಿಸಿದರು. ತೆರೆಸಾ ಕಾರ್ಡೋಜಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು