5:58 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನ: 124 ಚರ್ಚ್ ಗಳು ಭಾಗಿ

10/08/2025, 19:04

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನವು ಭಾನುವಾರ ನಗರದ ಕೋರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ 124 ಚರ್ಚ್ ಗಳ 1100 ಜನರು ಭಾಗವಹಿಸಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ಗುರು ಅತಿ ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಮೂಲ ಧರ್ಮ ಸಭೆ ಸಮುದಾಯ ರಾಜ್ಯ ಮಟ್ಟದ ಕಾರ್ಯದರ್ಶಿ ವಂದನೀಯ ಫಾ. ಮ್ಯಾಕ್ಸಿಮ್ ಡಯಾಸ್ ಮುಖ್ಯ ಅತಿಥಿಯಾಗಿದ್ದರು.

ಮುಖ್ಯ ನಿರ್ದೇಶಕರಾದ ವಂದನೀಯ ಫಾ. ಸುನಿಲ್ ಡಿ ಸೋಜಾ, ಕೋರ್ಡೆಲ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಿಲ್ವಿಯಾ ರೂತ್ ಕ್ಯಾಸ್ತಲಿನೊ, ಕಾರ್ಯದರ್ಶಿ ಅನಿಲ್ ಡೇಸಾ, ಸರ್ವ ಆಯೋಗಗಳ ಸಂಚಾಲಕ ಡಾಲ್ಫಿ ಡಿ ಸೋಜಾ, ಮೂಲ ಧರ್ಮ ಸಭೆಯ ಸಮುದಾಯದ ಕೋರ್ಡೆಲ್ ಚರ್ಚ್ ಸಂಚಾಲಕಿ ಜೂಲಿಯೆಟ್ ಮಿನೇಜಸ್, ಪ್ರಾಂತ್ಯ ಕಾರ್ಯದರ್ಶಿ ಆಶಾ ಮೊಂತೇರೊ ಅವರು ಉಪಸ್ಥಿತರಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಸರ್ವ ಆಯೋಗಗಳ ಸಂಚಾಲಕ ವಂದನೀಯ ಫಾ. ನವೀನ್ ಪಿಂಟೊ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮೂಲ ಧರ್ಮ ಸಭೆಯ ಸಮುದಾಯದ ಮಹತ್ವವನ್ನು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಕೋರ್ಡೆಲ್ ಚರ್ಚ್ ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಮೂಲ ಧರ್ಮ ಸಭೆಯ ಆಧ್ಯಾತ್ಮಿಕತೆಯನ್ನು ಈಗಿನ ಕ್ರೈಸ್ತರಲ್ಲಿ ಹೇಗೆ ಅಳವಡಿಸಿಕೊಳ್ಳ ಬಹುದೆಂದು ವಿವರಿಸಿದರು.
ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯನ್ನು ನಡೆಸಿ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ವಂದನೀಯ ಫಾ. ಸುನಿಲ್ ಡಿ ಸೋಜಾ ಸ್ವಾಗತಿಸಿ ಆಶಾ ಮೊಂತೇರೊ ವಂದಿಸಿದರು. ತೆರೆಸಾ ಕಾರ್ಡೋಜಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು