10:53 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ

10/08/2025, 19:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರಿ ಪ್ರಮಾಣದ ಮತಗಳ್ಳತನ ವಾಗಿದೆ ಎಂದು ಪರಾಜಿತ ಅಭ್ಯರ್ಥಿ ಹಾಗೂ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಹಳಷ್ಟು ಲೋಪವಾಗಿದೆ. ಬಿಜೆಪಿ ಮತಯಂತ್ರಗಳಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್ ಗಳ ಪೈಕಿ 292 ಬೂತ್ ಗಳಲ್ಲಿ ಮತಗಳ್ಳತನ ವಾಗಿದೆ., 292 ಇವಿಎಂ ಯಂತ್ರದಲ್ಲಿ ರಿಗ್ಗಿoಗ್ ಆಗಿದೆ ಆರೋಪಿಸಿದರು. 292 ಬೂತ್ ಗಳಲ್ಲಿ 1 ಲಕ್ಷದ 45 ಸಾವಿರ ಮತಗಳಿದ್ದು, ಅದರಲ್ಲಿ 22 ಸಾವಿರ ಮತಗಳು ಕಾಂಗ್ರೆಸ್ ಪರ ಬಂದಿವೆ. ಕಳೆದ ನಾಲ್ಕು ಚುನಾವಣೆಗಳಲ್ಲಿ ಇದೇ ಬೂತಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ. 50-60 ಮತಗಳು ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆಗಳು ಸಂಪೂರ್ಣ ಕಾಂಗ್ರೆಸ್ ಕಾರ್ಯಕರ್ತರದ್ದೇ ಆಗಿದೆ, ಅಲ್ಲಿಗೆ ಇದ್ದ ಅಷ್ಟೂ ಮತಗಳು ಬಿಜೆಪಿಗೆ ಹೋಗಲು ಹೇಗೆ ಸಾಧ್ಯ, ಮೈಸೂರಿನ ನರಸಿಂಹ ರಾಜ ಕ್ಷೇತ್ರದಲ್ಲೂ ಇದೇ ರೀತಿ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು