8:30 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

10/08/2025, 23:42

ಹಾವೇರಿ(reporterkarnataka.com): ಮತ‌ಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕತ್ತಲಲ್ಲಿ ಕಾಣದೇ ಇರುವ ಕರಿಬೆಕ್ಕು ಹುಡುಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ವಿಷ್ಣುವರ್ಧನ್ ಸ್ಮಾರಕ ತೆರವು ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಷ್ಣುವರ್ಧನ್ ಬಗ್ಗೆ ಅಭಿಮಾನ ಇದೆ. ರಾತ್ರೋರಾತ್ರಿ ಅವರ ಸ್ಮಾರಕ ತೆರವು ಮಾಡಿದ್ದು ದುಃಖ ತಂದಿದೆ ಎಂದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ ಮಾಡಿದ್ದೇವು. ಅದಕ್ಕೆ 12 ಕೋಟಿ ರೂ ಕೊಡಲಾಗಿತ್ತು. ಈ ಸಮಸ್ಯೆ ಸೌಹಾರ್ದ ರೀತಿ ಬಗೆಹರಿಸುವುದು ಸೂಕ್ತ ಅಂತ ನನ್ನ ಅಭಿಪ್ರಾಯ ಎಂದು ಹೇಳಿದರು.

*ನದಿ ಜೋಡಣೆ:*
ಹಾವೇರಿ, ಗದಗ, ಕೊಪ್ಪಳ, ರಾಯಚೂರು ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇದೆ. ಜಲಾನಯನ ಪ್ರದೇಶದಲ್ಲಿ ಹಲವು ಕುಡಿಯುವ ನೀರಿನ ಯೋಜನೆ‌ಗಳಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಆಗುತ್ತದೆ. ನೀರಿನ ಕೊರತೆ ತುಂಬಿಕೊಡಲು ಬೇಡ್ತಿ-ವರದಾ ನದಿ‌ ಜೋಡಣೆ ಯೋಜನೆ ಮಾಡುವ ಉದ್ದೇಶವಿದೆ ಎಂದು ಹೇಳಿದರು.
ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯವರಿಗೆ ಪರಿಸರದ ಸಮಸ್ಯೆ, ಜೀವ ವೈವಿಧ್ಯಕ್ಕೆ ಸಮಸ್ಯೆ ಆಗುತ್ತದೆ ಅಂತ ಹಿಂದೆಲ್ಲಾ ಚರ್ಚೆ ಆಗಿದ್ದವು. ನಾನು ಮೊನ್ನೆ ಕೇಂದ್ರ ಸಚಿವರಾದ ಸಿ.ಆರ್.ಪಾಟೀಲ್, ಸೋಮಣ್ಣ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ವರದಾ ಬೇಡ್ತಿ ಯೋಜನೆಗೆ ಒಪ್ಪಿಗೆ ಕೊಡಲು ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ. ಕೆಲವೇ ದಿನಗಳಲ್ಲಿ ಒಳ್ಳೆ ಸುದ್ದಿ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಡಿಪಿಆರ್ ಕಳಿಸಿದರೆ ಮುಂದಿನ ಪ್ರಕ್ರಿಯೆ ಆಗುತ್ತದೆ. ವರದಾ, ಧರ್ಮ, ಬೇಡ್ತಿ ನದಿ ನೀರಿನ ಲಿಂಕ್ ರಾಜ್ಯ ಸರ್ಕಾರದ ವಲಯದಲ್ಲಿ ತಗೋಬೇಕು. ನೀರಾವರಿ ಯೋಜನೆ ಜಾರಿ ಅಷ್ಟು ಸುಲಭ ಅಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಲು ಇಂದು ಸಭೆ ನಡೆಸಿದ್ದೇವೆ ಎಂದು ನುಡಿದರು.
ಬೆಡ್ತಿ ವರದಾ ನದಿ ಜೋಡಣೆ ಯೋಜನೆಗೆ ಶಾಸಕ ಶಿವರಾಮ ಹೆಬ್ಬಾರ್ ವಿರೋಧಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ಜನರ ಬದುಕು ಹಾಳಾಗುವುದಿಲ್ಲ. ಯೋಜನೆಯಲ್ಲಿ ಬದಲಾವಣೆ ಆಗಿದೆ. ಅವರನ್ನೂ ಒಪ್ಪಿಸಿ ಅನುಕೂಲ ಆಗುವ ರೀತಿ ಮಾಡುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು