10:58 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Mysore | ಬಂಡೀಪುರ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ: ಕಾಲಿನಡಿಗೆ ಸಿಲುಕಿಯೂ ಪಾರಾದ ಪ್ರವಾಸಿಗ!; ವೀಡಿಯೋ ವೈರಲ್

11/08/2025, 12:46

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿಯಲು ಯತ್ನಿಸಿದ ಘಟನೆ ಬಂಡೀಪುರದ ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.


ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿದೆ. ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ಆನೆ ನಿಂತಿದ್ದು, ಈ ವೇಳೆ ಪ್ರವಾಸಿಗ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ್ದಾನೆ.
ಈ ವೇಳೆ ಆನೆ ಪ್ರವಾಸಿಗನನ್ನು ಓಡಿಸಿಕೊಂಡು ಹೋಗಿದ್ದು, ಕೆಲಕಾಲ ಅಟ್ಟಾಡಿಸಿದೆ. ಓಡುವ ವೇಳೆ ಪ್ರವಾಸಿಗ ಕಾಲು ಜಾರಿ ಬಿದ್ದಿದ್ದು, ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಬಳಿಕ ಆನೆ ತುಳಿಯಲು ಯತ್ನಿಸಿ ಸ್ಥಳದಿಂದ ಹೊರಟು ಹೋಗಿದೆ. ಪರಿಣಾಮ ಅದೃಷ್ಟವಶಾತ್ ಪ್ರವಾಸಿಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೀಡಿಯೋ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು