7:57 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

Mysore | ಬಂಡೀಪುರ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ: ಕಾಲಿನಡಿಗೆ ಸಿಲುಕಿಯೂ ಪಾರಾದ ಪ್ರವಾಸಿಗ!; ವೀಡಿಯೋ ವೈರಲ್

11/08/2025, 12:46

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿಯಲು ಯತ್ನಿಸಿದ ಘಟನೆ ಬಂಡೀಪುರದ ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.


ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿದೆ. ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ಆನೆ ನಿಂತಿದ್ದು, ಈ ವೇಳೆ ಪ್ರವಾಸಿಗ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ್ದಾನೆ.
ಈ ವೇಳೆ ಆನೆ ಪ್ರವಾಸಿಗನನ್ನು ಓಡಿಸಿಕೊಂಡು ಹೋಗಿದ್ದು, ಕೆಲಕಾಲ ಅಟ್ಟಾಡಿಸಿದೆ. ಓಡುವ ವೇಳೆ ಪ್ರವಾಸಿಗ ಕಾಲು ಜಾರಿ ಬಿದ್ದಿದ್ದು, ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಬಳಿಕ ಆನೆ ತುಳಿಯಲು ಯತ್ನಿಸಿ ಸ್ಥಳದಿಂದ ಹೊರಟು ಹೋಗಿದೆ. ಪರಿಣಾಮ ಅದೃಷ್ಟವಶಾತ್ ಪ್ರವಾಸಿಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೀಡಿಯೋ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು