8:20 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ಎಂದ ಡಿ.ಎಸ್. ಅರುಣ್

11/08/2025, 20:11

ಬೆಂಗಳೂರು (reporterkarnataka.com): ರಾಜ್ಯ ವಿಧಾನ ಮಂಡಲ 156ನೇ ಅಧಿವೇಶನದ ಮೊದಲನೇಯ ದಿನವಾದ ಇಂದು, ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಶಾಸಕರಾದ ಡಿ.ಎಸ್. ಅರುಣ್ ರವರು ಪ್ರಸ್ತಾಪಿಸಿದರು.
ರಾಜ್ಯದ ಧಾರ್ಮಿಕ ಹೆಮ್ಮೆ ಹಾಗೂ ಲಕ್ಷಾಂತರ ಹಿಂದೂ ಭಕ್ತರ ಭಾವನೆಯ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ ಯಾವುದೇ ದೃಢವಾದ ಸಾಕ್ಷ್ಯವಿಲ್ಲದೆ ಅನಾಮಿಕ ವ್ಯಕ್ತಿ ಮಾಡಿದ ಆರೋಪವನ್ನು ತೀವ್ರವಾಗಿ ಖಂಡಿಸಿದರು.
ಇಂತಹ ಸುಳ್ಳು ಹಾಗೂ ಉದ್ದೇಶಪೂರಿತ ಆರೋಪಗಳಿಂದ ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಧರ್ಮ ವಿರೋಧಿ ಶಕ್ತಿಗಳ ಹಳೆಯ ತಂತ್ರ. ಸರ್ಕಾರವು ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಿ, ಆರೋಪದ ಹಿಂದೆ ಇರುವ ನಿಜಸ್ವರೂಪವನ್ನು ತಕ್ಷಣ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರವು ತನಿಖೆಯನ್ನು ತ್ವರಿತಗೊಳಿಸಲು, ಗೃಹ ಸಚಿವರ ಮೂಲಕ ಪ್ರಗತಿ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲು ಹಾಗೂ ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿ.ಎಸ್.ಅರುಣ್ ರವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು