3:01 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಮಾಸ್ಕ್ ಮ್ಯಾನ್..!

12/08/2025, 12:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಸ್ಥಾನದ ಅಕ್ಕಪಕ್ಕದಲ್ಲಿ ಇರುವ ದೇವಸ್ಥಾನಗಳಿಗೆ ಕನ್ನ ಹಾಕುವ ಸಲುವಾಗಿ ಮಾಸ್ಕ್ ಮ್ಯಾನ್ ಒಬ್ಬ ಬಂದು ದೇವಸ್ಥಾನದ ಬಾಗಿಲು ಮುರಿದು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

ಪಟ್ಟಣದ ರಥಬೀದಿಯಲ್ಲಿರುವ ದೇವಸ್ಥಾನ ಒಂದರಲ್ಲಿ
ಬೆಳಗಿನ ಜಾವ ಕಳ್ಳತನ ಮಾಡಲು ಪ್ರಯತ್ನ ಮಾಡಿದ್ದು ದೇವಸ್ಥಾನದ ಮುಂಭಾಗದ ಬಾಗಿಲಿನ ಚಿಲಕ ಮುರಿದು ಹಾಕಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ವಿಚಾರ ತಿಳಿದವರೇ ಯಾರೋ ಕಿಡಿಗೇಡಿಗಳು ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂಬ ಸಂಶಯ ಮೂಡಿದೆ.
ವೆಂಕಟರಮಣ ದೇವಸ್ಥಾನದ ಸಿಸಿ ಕ್ಯಾಮರದಲ್ಲಿ ಮಾಸ್ಕ್ ಮ್ಯಾನ್ ಓಡಾಡಿರುವ ದೃಶ್ಯ ಸೆರೆಯಾಗಿದ್ದು ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದೇವಸ್ಥಾನದಿಂದ ಯಾವುದೇ ವಸ್ತುಗಳು ಕಳ್ಳತನ ಆಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಆದರೂ ಆ ಮಾಸ್ಕ್ ಮ್ಯಾನ್ ಯಾರು? ಎಂಬುದು ತಿಳಿದು ಬರಬೇಕಿದೆ.. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು