1:40 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಮಾಸ್ಕ್ ಮ್ಯಾನ್..!

12/08/2025, 12:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಸ್ಥಾನದ ಅಕ್ಕಪಕ್ಕದಲ್ಲಿ ಇರುವ ದೇವಸ್ಥಾನಗಳಿಗೆ ಕನ್ನ ಹಾಕುವ ಸಲುವಾಗಿ ಮಾಸ್ಕ್ ಮ್ಯಾನ್ ಒಬ್ಬ ಬಂದು ದೇವಸ್ಥಾನದ ಬಾಗಿಲು ಮುರಿದು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

ಪಟ್ಟಣದ ರಥಬೀದಿಯಲ್ಲಿರುವ ದೇವಸ್ಥಾನ ಒಂದರಲ್ಲಿ
ಬೆಳಗಿನ ಜಾವ ಕಳ್ಳತನ ಮಾಡಲು ಪ್ರಯತ್ನ ಮಾಡಿದ್ದು ದೇವಸ್ಥಾನದ ಮುಂಭಾಗದ ಬಾಗಿಲಿನ ಚಿಲಕ ಮುರಿದು ಹಾಕಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ವಿಚಾರ ತಿಳಿದವರೇ ಯಾರೋ ಕಿಡಿಗೇಡಿಗಳು ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂಬ ಸಂಶಯ ಮೂಡಿದೆ.
ವೆಂಕಟರಮಣ ದೇವಸ್ಥಾನದ ಸಿಸಿ ಕ್ಯಾಮರದಲ್ಲಿ ಮಾಸ್ಕ್ ಮ್ಯಾನ್ ಓಡಾಡಿರುವ ದೃಶ್ಯ ಸೆರೆಯಾಗಿದ್ದು ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದೇವಸ್ಥಾನದಿಂದ ಯಾವುದೇ ವಸ್ತುಗಳು ಕಳ್ಳತನ ಆಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಆದರೂ ಆ ಮಾಸ್ಕ್ ಮ್ಯಾನ್ ಯಾರು? ಎಂಬುದು ತಿಳಿದು ಬರಬೇಕಿದೆ.. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು