1:30 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

12/08/2025, 14:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂಬುದು ಪತ್ತೆಯಾಗಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿ ಬಂದಿದ್ದರು. ಆದರೆ, ನಂತರ ಅವರನ್ನು ಪತ್ತೆ ಮಾಡಿದ ಅರಣ್ಯ ಇಲಾಖೆ, 25 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ, ಅವರಿಂದಲೇ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ಸಾರುವ ವಿಡಿಯೋ ಮಾಡಿಸಿ ಬಿಡುಗಡೆ ಮಾಡಿಸಿದೆ.
ಕಾಡಾನೆ ದಾಳಿಗೊಳಗಾದ ಬಸವರಾಜು ಹೇಳಿದ್ದೇನು?
‘ನಾನು ಬಂಕಾಪುರದ ದೇವಸ್ಥಾನಕ್ಕೆ ಹೋಗಿದ್ದೆ. ವಾಪಸ್ ಬರುವಾಗ ಮೋಜು ಮಸ್ತಿಗೆ ಕಾಡಾನೆ ಜತೆ ಸೆಲ್ಫೀ ತೆಗೆಯಲು ಮುಂದಾಗಿದ್ದೆ. ಈ ವೇಳೆ ನನ್ನ ಮೇಲೆ ಕಾಡಾನೆ ದಾಳಿ ನಡೆಸಿತು. ನನ್ನ ಪ್ರಾಣ ಉಳಿದಿದ್ದೇ ಹೆಚ್ಚು. ಯಾರು ಕೂಡ ಕಾಡು ಪ್ರಾಣಿಗಳ ಜೊತೆ ಚೆಲ್ಲಾಟ ಆಡಬೇಡಿ. ಇನ್ಮುಂದೆ ಯಾರೂ ಕೂಡ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಬೇಡಿ, ಯಾರು ಕೂಡ ದುಸ್ಸಾಹಸಕ್ಕೆ ಕೈ ಹಾಕಬೇಡಿ. ನನ್ನ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಂಡು ದಂಡ ವಿಧಿಸಿದೆ. ಅದಕ್ಕಿಂತಲೂ ಜೀವ ಉಳಿದಿದ್ದು ಮುಖ್ಯ’ ಎಂದು ಬಸವರಾಜು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು