2:15 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

12/08/2025, 14:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂಬುದು ಪತ್ತೆಯಾಗಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿ ಬಂದಿದ್ದರು. ಆದರೆ, ನಂತರ ಅವರನ್ನು ಪತ್ತೆ ಮಾಡಿದ ಅರಣ್ಯ ಇಲಾಖೆ, 25 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ, ಅವರಿಂದಲೇ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ಸಾರುವ ವಿಡಿಯೋ ಮಾಡಿಸಿ ಬಿಡುಗಡೆ ಮಾಡಿಸಿದೆ.
ಕಾಡಾನೆ ದಾಳಿಗೊಳಗಾದ ಬಸವರಾಜು ಹೇಳಿದ್ದೇನು?
‘ನಾನು ಬಂಕಾಪುರದ ದೇವಸ್ಥಾನಕ್ಕೆ ಹೋಗಿದ್ದೆ. ವಾಪಸ್ ಬರುವಾಗ ಮೋಜು ಮಸ್ತಿಗೆ ಕಾಡಾನೆ ಜತೆ ಸೆಲ್ಫೀ ತೆಗೆಯಲು ಮುಂದಾಗಿದ್ದೆ. ಈ ವೇಳೆ ನನ್ನ ಮೇಲೆ ಕಾಡಾನೆ ದಾಳಿ ನಡೆಸಿತು. ನನ್ನ ಪ್ರಾಣ ಉಳಿದಿದ್ದೇ ಹೆಚ್ಚು. ಯಾರು ಕೂಡ ಕಾಡು ಪ್ರಾಣಿಗಳ ಜೊತೆ ಚೆಲ್ಲಾಟ ಆಡಬೇಡಿ. ಇನ್ಮುಂದೆ ಯಾರೂ ಕೂಡ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಬೇಡಿ, ಯಾರು ಕೂಡ ದುಸ್ಸಾಹಸಕ್ಕೆ ಕೈ ಹಾಕಬೇಡಿ. ನನ್ನ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಂಡು ದಂಡ ವಿಧಿಸಿದೆ. ಅದಕ್ಕಿಂತಲೂ ಜೀವ ಉಳಿದಿದ್ದು ಮುಖ್ಯ’ ಎಂದು ಬಸವರಾಜು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು