5:45 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಜತೆ ಕೊಡಗಿನ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ: ಬಾಳುಗೋಡು ವಸತಿ ಶಾಲೆಯ ಸಂಭ್ರಮ

12/08/2025, 15:17

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಖೆಯ ವಿದ್ಯಾರ್ಥಿಗಳಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಕ್ಷಾ ಬಂಧನ ಆಚರಿಸಿದರು.
ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಾ ಬಂದಿದ್ದು ಈ ಭಾರಿ ಬುಡಕಟ್ಟು ವಿದ್ಯಾರ್ಥಿಗಳಿಗೆ ರಾಜ್ಯದಿಂದ ರಾಯಚೂರು, ಬೆಳಗಾವಿ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಿಂದ ಬುಡಕಟ್ಟು ಸಮುದಾಯದ ವಸತಿ ಶಾಲೆಗೆ ಈ ಅವಕಾಶ ಕಲ್ಪಿಸಲಾಗಿತ್ತು. ವಿರಾಜಪೇಟೆಯ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆ ಸಂಗೀತ ಶಿಕ್ಷಕಿ ಕುಮಾರಿ ಕೋಮಲ್, ವಿದ್ಯಾರ್ಥಿಗಳಾದ ಆರನೇ ತರಗತಿಯ ಎಂ. ಎಲ್. ಪ್ರತೀಕ್ಷಾ, ಏಳನೇ ತರಗತಿ ಸಿ. ಎಲ್. ಕನ್ನಿಕಾ, 8ನೇ ತರಗತಿಯ ತನ್ವಿ ತಂಗಮ್ಮ, 9ನೇ ತರಗತಿಯ ಹೆಚ್. ಕೆ. ನೇಹಾ ಮತ್ತು 10ನೇ ತರಗತಿಯ ಕೆ. ಎಂ ಪ್ರಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು