ಇತ್ತೀಚಿನ ಸುದ್ದಿ
Chikkamagaluru | ಚಾರ್ಮಾಡಿ ಘಾಟ್ನಲ್ಲಿ ದುರ್ಘಟನೆ: 21 ವರ್ಷದ ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ
12/08/2025, 15:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಕೊಟ್ಟಿಗೆಹಾರ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಸೋಮವಾರ ಮಧ್ಯಾಹ್ನ ದುರಂತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯರು ಮತ್ತು ಸ್ನೇಹಿತರು ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು.
ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾಗಿದ್ದು, ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತು ಪ್ರಪಾತದ ಅಂಚು ಜಾರುವಿಕೆ ಅಪಾಯವಾಗಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.