7:27 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮ: ವಿಧಾನ ಪರಿಷತ್ ನಲ್ಲಿ ಸರಕಾರದ ಭರವಸೆ

12/08/2025, 20:02

ಬೆಂಗಳೂರು (reporterkarnataka.com): ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗುವುದೆಂದು ಸಚಿವ ಈಶ್ವರ್ ಖಂಡ್ರೆವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಡಾ‌. ಎಂ.ಜಿ.ಮುಳೆ ಅವರು ನಿಯಮ 72 ರ ಗಮನ ಸೆಳೆಯುವ ಸೂಚನೆಯಡಿ ಬಸವ ಕಲ್ಯಾಣ ಅಭಿವೃಧ್ದಿಗೆ ಅನುದಾನ‌ ಕೊರತೆ ಕುರಿತಂತೆ ಕೇಳಲಾದ ಪ್ರಶ್ನೆಗೆ ಕಂದಾಯ ಸಚಿವರ ಪರವಾಗಿ ಉತ್ತರಿಸಿದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗಾಗಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ರಚನೆಯಾಗಿದ್ದು, ಇಲ್ಲಿಯವರೆಗೆ 17 ಸ್ಮಾರಕಗಳನ್ನು ಅಭಿವೃದ್ದಿ ಪಡಿಸಲಾಗಿದ್ದು, ಉಳಿದ ಸ್ಮಾರಕಗಳ ಅಭಿವೃದ್ಧಿಯನ್ನು ಅನುದಾನದ ಲಭ್ಯತೆಗೆ ಅನುಗುಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. 26-06-2025 ರಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಯೋಜನೆ ಪರಿಷ್ಕೃತ ಗೊಂಡಿದ್ದು, 742 ಕೋಟಿಗಳಿಗೆ ಅನುಮೋದನೆ ನೀಡಲಾಗಿದ್ದು, ಸರ್ಕಾರ ಇದುವರೆಗೆ 325 ಕೋಟಿ ಬಿಡುಗಡೆ ಮಾಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದರು
ಶರಣರ ವಚನಗಳ ಸಂಗ್ರಹ ಕಾರ್ಯ ಪೂರ್ಣಗೊಂಡಿದ್ದು, ಅದನ್ನು ಧ್ವನಿ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ನೂತನ ಅನುಭವ ಮಂಟಪದ ಒಳಾಂಗಣದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಬಸವ ವನ ಉದ್ಯಾನವನದ ಸುತ್ತ ತಡೆಗೋಡೆಯನ್ನು ಸಹ ನಿರ್ಮಿಸಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು