ಇತ್ತೀಚಿನ ಸುದ್ದಿ
NSUI | ಮಂಗಳೂರು: 100ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಎನ್ ಎಸ್ ಯುಐ ಸೇರ್ಪಡೆ
13/08/2025, 18:54

ಮಂಗಳೂರು(reporterkarnataka.com): ಮಂಗಳೂರು ನಗರದ ಎಬಿವಿಪಿಯ 100ಕ್ಕೂ ಅಧಿಕ ಕಾರ್ಯಕರ್ತರು ಬುಧವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎನ್ ಎಸ್ ಯುಐ ಸೇರ್ಪಡೆಗೊಂಡಿದ್ದಾರೆ.
ಎನ್ ಎಸ್ ಯುಐ ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ಎಬಿವಿಪಿಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ,ಡಿಸಿಸಿ ಮಾಧ್ಯಮ ವಕ್ತಾರ ಉದಯ್ ಆಚಾರ್ ಉಪಸ್ಥಿತರಿದ್ದರು.